ಹಾಸನ: ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಇಂದು ಮುಂಜಾನೆಯೇ ಬಾಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದ್ದು, ಹಳಿ ಮೇಲೆ ರಾಶಿಗಟ್ಟಲೇ ಮಣ್ಣು ಬಿದ್ದಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ಮತ್ತು ಬೆಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.
ಇನ್ನು ಗುಡ್ಡ ಕುಸಿತದಿಂದ ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದ್ದು, ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿದಂತೆ ಆರು ಕಡೆ ಈಗ ರೈಲುಗಳು ನಿಂತಿವೆ. ಮಧ್ಯರಾತ್ರಿಯಿಂದ ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ಪರದಾಟ ನಡೆಸಿದ್ದು, ಪರ್ಯಾಯ ವಾಹನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಹಾಸನ ಭಾಗದಲ್ಲಿ ಮತ್ತೆ ಮತ್ತೆ ಗುಡ್ಡ ಕುಸಿತ ಉಂಟಾಗುತ್ತಿದ್ದು, ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಜಿಲ್ಲಾಡಳಿತದ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಅನಧಿಕೃತ ಹೋಂಸ್ಟೇಗಳಿಂದಲೇ ಈ ರೀತಿ ಗುಡ್ಡ ಕುಸಿತ ಉಂಟಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…