ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
25 ವರ್ಷದ ಯುವತಿ ಶ್ವೇತಾ ಮೃತಪಟ್ಟ ಸಾಫ್ಟ್ವೇರ್ ಇಂಜಿನಿಯರ್, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ ಏಪ್ರಿಲ್ 25ರಂದು ಸಂಜೆ ಮನೆಯಲ್ಲಿದ್ದಾಗ ಹಠಾತ್ತಾಗಿ ಕುಸಿದು ಬಿದ್ದಿದ್ದರು.
ತಕ್ಷಣ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದು ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಚಿಕಿತ್ಸೆ ಮಾಡುತ್ತಿರುವಾಗಲೇ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಶ್ವೇತಾ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ತುಂಬು ವಯಸ್ಸಿನ ಮಗಳ ಹಠಾತ್ ಸಾವಿನಿಂದ ಗಂಗಾಧರ್ ಕುಟುಂಬ ಕಂಗಾಲಾಗಿದ್ದು, ಹಸನ್ಮುಖಿ ಯುವತಿಯ ಸಾವಿಗೆ ಮ್ಯಾಗ್ನಾ ಸಾಫ್ಟ್ ಕಂಪನಿಯ ಸಹೋದ್ಯೋಗಿಗಳು ಮತ್ತು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…