ಹಾಸನ

ಹಾಸನ| ಆಸ್ತಿಗಾಗಿ ತಂದೆ ಹಾಗೂ ಅಣ್ಣನನ್ನೇ ಕೊಲೆ ಮಾಡಿದ ಮಗ

ಹಾಸನ: ಆಸ್ತಿ ವಿಚಾರವಾಗಿ ಜಗಳವಾಗಿ ಮಗನೇ ತಂದೆ ಹಾಗೂ ಸಹೋದರನನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ದೇವೇಗೌಡ ಹಾಗೂ ಸಹೋದರ ಮಂಜುನಾಥ್‌ ಎಂಬುವವರನ್ನು ಮೋಹನ್‌ ಎಂಬಾತ ಕೊಲೆ ಮಾಡಿದ್ದಾನೆ.

ಮಂಜುನಾಥ್‌ ಹಾಗೂ ಮೋಹನ್‌ ಇಬ್ಬರೂ ವಿವಾಹವಾಗಿರಲಿಲ್ಲ. ಮಂಜುನಾಥ್‌ ತಂದೆ-ತಾಯಿ ಜೊತೆ ವಾಸವಾಗಿದ್ದು, ಮೋಹನ್‌ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಾಗಿದ್ದ.

ತಂದೆ ದೇವೇಗೌಡ ಕಳೆದ ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಿದ ಹಣ ತನಗೂ ನೀಡಿಲ್ಲ ಎಂಬ ಕಾರಣಕ್ಕೆ ಕ್ಯಾತೆ ತೆಗೆದಿದ್ದ. ಇದೇ ಕಾರಣಕ್ಕೆ ಜಗಳವಾಗಿ ಮಧ್ಯರಾತ್ರಿ ಮಲಗಿದ್ದ ಸಹೋದರ ಮಂಜುನಾಥ್‌ನನ್ನು ಮಚ್ಚಿನಿಂದ ಹೊಡೆದಿದ್ದಾನೆ. ಈ ವೇಳೆ ತಡೆಯಲು ಬಂದಾಗ ತಂದೆಯ ಮೇಲೂ ಹಲ್ಲೆ ಮಾಡಿದ್ದಾನೆ.

ತಾಯಿಯ ಮೇಲೂ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ತಾಯಿ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ತಂದೆ ಹಾಗೂ ಸಹೋದರ ಇಬ್ಬರನ್ನೂ ಕೊಲೆ ಮಾಡಿ ತಾನೂ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಈ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

1 hour ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

2 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

2 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

3 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

3 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

4 hours ago