Hassan | Son kills father and brother for property
ಹಾಸನ: ಆಸ್ತಿ ವಿಚಾರವಾಗಿ ಜಗಳವಾಗಿ ಮಗನೇ ತಂದೆ ಹಾಗೂ ಸಹೋದರನನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ದೇವೇಗೌಡ ಹಾಗೂ ಸಹೋದರ ಮಂಜುನಾಥ್ ಎಂಬುವವರನ್ನು ಮೋಹನ್ ಎಂಬಾತ ಕೊಲೆ ಮಾಡಿದ್ದಾನೆ.
ಮಂಜುನಾಥ್ ಹಾಗೂ ಮೋಹನ್ ಇಬ್ಬರೂ ವಿವಾಹವಾಗಿರಲಿಲ್ಲ. ಮಂಜುನಾಥ್ ತಂದೆ-ತಾಯಿ ಜೊತೆ ವಾಸವಾಗಿದ್ದು, ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಾಗಿದ್ದ.
ತಂದೆ ದೇವೇಗೌಡ ಕಳೆದ ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಿದ ಹಣ ತನಗೂ ನೀಡಿಲ್ಲ ಎಂಬ ಕಾರಣಕ್ಕೆ ಕ್ಯಾತೆ ತೆಗೆದಿದ್ದ. ಇದೇ ಕಾರಣಕ್ಕೆ ಜಗಳವಾಗಿ ಮಧ್ಯರಾತ್ರಿ ಮಲಗಿದ್ದ ಸಹೋದರ ಮಂಜುನಾಥ್ನನ್ನು ಮಚ್ಚಿನಿಂದ ಹೊಡೆದಿದ್ದಾನೆ. ಈ ವೇಳೆ ತಡೆಯಲು ಬಂದಾಗ ತಂದೆಯ ಮೇಲೂ ಹಲ್ಲೆ ಮಾಡಿದ್ದಾನೆ.
ತಾಯಿಯ ಮೇಲೂ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ತಾಯಿ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ತಂದೆ ಹಾಗೂ ಸಹೋದರ ಇಬ್ಬರನ್ನೂ ಕೊಲೆ ಮಾಡಿ ತಾನೂ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಈ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೋಹನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…