ಹಾಸನ

ಹಾಸನ| ಆಸ್ತಿಗಾಗಿ ತಂದೆ ಹಾಗೂ ಅಣ್ಣನನ್ನೇ ಕೊಲೆ ಮಾಡಿದ ಮಗ

ಹಾಸನ: ಆಸ್ತಿ ವಿಚಾರವಾಗಿ ಜಗಳವಾಗಿ ಮಗನೇ ತಂದೆ ಹಾಗೂ ಸಹೋದರನನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ದೇವೇಗೌಡ ಹಾಗೂ ಸಹೋದರ ಮಂಜುನಾಥ್‌ ಎಂಬುವವರನ್ನು ಮೋಹನ್‌ ಎಂಬಾತ ಕೊಲೆ ಮಾಡಿದ್ದಾನೆ.

ಮಂಜುನಾಥ್‌ ಹಾಗೂ ಮೋಹನ್‌ ಇಬ್ಬರೂ ವಿವಾಹವಾಗಿರಲಿಲ್ಲ. ಮಂಜುನಾಥ್‌ ತಂದೆ-ತಾಯಿ ಜೊತೆ ವಾಸವಾಗಿದ್ದು, ಮೋಹನ್‌ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಾಗಿದ್ದ.

ತಂದೆ ದೇವೇಗೌಡ ಕಳೆದ ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಿದ ಹಣ ತನಗೂ ನೀಡಿಲ್ಲ ಎಂಬ ಕಾರಣಕ್ಕೆ ಕ್ಯಾತೆ ತೆಗೆದಿದ್ದ. ಇದೇ ಕಾರಣಕ್ಕೆ ಜಗಳವಾಗಿ ಮಧ್ಯರಾತ್ರಿ ಮಲಗಿದ್ದ ಸಹೋದರ ಮಂಜುನಾಥ್‌ನನ್ನು ಮಚ್ಚಿನಿಂದ ಹೊಡೆದಿದ್ದಾನೆ. ಈ ವೇಳೆ ತಡೆಯಲು ಬಂದಾಗ ತಂದೆಯ ಮೇಲೂ ಹಲ್ಲೆ ಮಾಡಿದ್ದಾನೆ.

ತಾಯಿಯ ಮೇಲೂ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ತಾಯಿ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ತಂದೆ ಹಾಗೂ ಸಹೋದರ ಇಬ್ಬರನ್ನೂ ಕೊಲೆ ಮಾಡಿ ತಾನೂ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಈ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

59 mins ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

1 hour ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

6 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

22 hours ago