Chicken rice to street dogs: BBMP clarification
ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೇಲೂರಿನ ಜೈಭೀಮ್ ನಗರದಲ್ಲಿ ನಡೆದಿದೆ.
ಶಿಕ್ಷಕಿಯ ಮುಖ, ಕೈ-ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದು, ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಪತಿ ಸೇರಿದಂತೆ 7 ಮಂದಿಯ ಮೇಲೂ ನಾಯಿ ದಾಳಿ ಮಾಡಿವೆ.
ಶಿಕ್ಷಕಿ ಚಿಕ್ಕಮ್ಮ ಎಂಬುವವರೇ ಗಂಭೀರವಾಗಿ ಗಾಯಗೊಂಡಿರುವವರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ ಗಾಯಾಳುಗಳನ್ನು ಬೇಲೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕ್ಕಮ್ಮ ಅವರಿಗೆ ನೀಡಿದ್ದ ಸಮೀಕ್ಷೆ ಮುಗಿಸಲು ಇಂದು ಕಡೆಯ ದಿನವಾಗಿತ್ತು. ಬಾಕಿಯಿದ್ದ ಮೂರು ಮನೆ ಸಮೀಕ್ಷೆ ನಡೆಸಲು ಅವರು ಪತಿ ಜೊತೆಗೆ ತೆರಳಿದ್ದರು. ಈ ವೇಳೆ ನಾಯಿಗಳು ದಾಳಿ ಮಾಡಿವೆ ಎಂದು ತಿಳಿದುಬಂದಿದೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…