ಹಾಸನ

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌ ಕಾಲೋನಿಯಲ್ಲಿ ನಡೆದಿದೆ.

ಇದನ್ನು ಓದಿ: ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮೃತನನ್ನು ಬಿಹಾರ ಮೂಲದ ಬರಿಕುಲ್‌ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಸಲೀಂ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಕಂಬವೇರಿ ವಿದ್ಯುತ್‌ ತಂತಿ ದುರಸ್ತಿ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಕಾರ್ಮಿಕರಿಗೆ ಶಾಕ್‌ ಹೊಡೆಯುತ್ತಿದ್ದಂತೆ ಇನ್ನುಳಿದ ಮೂವರು ಕಾರ್ಮಿಕರು ಅಲ್ಲಿಂದ ಓಡಿ ಹೋಗಿದ್ದಾರೆ. ಗಾಯಗೊಂಡ ಯುವಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

54 mins ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

60 mins ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

1 hour ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

15 hours ago