ಹಾಸನ

ಹಾಸನಾಂಬೆ ದರ್ಶನ : ಅ.22ಕ್ಕೆ ಕೊನೆ

ಹಾಸನ : ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದ್ದಾರೆ.

ದೈನಂದಿನ ಮಾಹಿತಿ ನೀಡಿರುವ ಸಚಿವರು, ದೀಪಾವಳಿ ವಿಶೇಷ ಪೂಜೆ ನೈವೇದ್ಯಗಳು ಹಾಗೂ ಇತರ ಅಲಂಕಾರಗಳ ಕಾರಣಕ್ಕಾಗಿ ಕೆಲವು ಸಂದರ್ಭಗಳಲ್ಲಿ ದೇವಸ್ಥಾನದ ಬಾಗಿಲುಗಳನ್ನು ಮುಚ್ಚಲಾಗಿದೆ ಎಂದು ವಿವರಿಸಿದ್ದಾರೆ.

ಇದನ್ನು ಓದಿ: ಹಬ್ಬದ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ

ಸೋಮವಾರ ಬೆಳಿಗ್ಗೆಯೂ ಹಾಸನಾಂಬ ದರ್ಶನ ಸುಗಮವಾಗಿ ನಡೆದಿದೆ. ಪೂಜಾ ಕಾರ್ಯಕ್ರಮದ ಕಾರಣ ಸೋಮವಾರ ಹಾಗೂ ಮಂಗಳವಾರ ಮಧ್ಯಾಹ್ನ ೨ – ೩.೩೦ ಗಂಟೆಯ ನಡುವೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಮಂಗಳವಾರ ದೀಪಾವಳಿ ವಿಶೇಷ ಪೂಜೆಯ ಕಾರಣಕ್ಕೆ ರಾತ್ರಿ ೯ ಗಂಟೆಗೆ ಸಾರ್ವಜನಿಕ ದರ್ಶನದ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ಬುಧವಾರ ಬೆಳಗಿನ ಜಾವ ೫.೩೦ಕ್ಕೆ ಪೂಜೆ ಮುಗಿಸಿದ ನಂತರ ಮತ್ತೆ ದರ್ಶನ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.

ಕೊನೆಯ ದಿನವಾದ ಬುಧವಾರ ಸಂಜೆ ೭ ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ಅದೇ ದಿನ ಸಂಜೆ ಸಿದ್ದೇಶ್ವರ ಸ್ವಾಮಿಯ ಜಾತ್ರೆ ನಡೆಯಲಿದೆ. ಗುರುವಾರ ಮಧ್ಯಾಹ್ನ ಶಾಸ್ತ್ರದ ಪ್ರಕಾರ ಪೂಜೆ ನೆರವೇರಿಸಿ ಮುಂದಿನ ವರ್ಷದವರೆಗೆ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಆದರೆ, ಈ ದಿನ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

31 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

2 hours ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

3 hours ago