ಹಾಸನ : ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದ್ದಾರೆ.
ದೈನಂದಿನ ಮಾಹಿತಿ ನೀಡಿರುವ ಸಚಿವರು, ದೀಪಾವಳಿ ವಿಶೇಷ ಪೂಜೆ ನೈವೇದ್ಯಗಳು ಹಾಗೂ ಇತರ ಅಲಂಕಾರಗಳ ಕಾರಣಕ್ಕಾಗಿ ಕೆಲವು ಸಂದರ್ಭಗಳಲ್ಲಿ ದೇವಸ್ಥಾನದ ಬಾಗಿಲುಗಳನ್ನು ಮುಚ್ಚಲಾಗಿದೆ ಎಂದು ವಿವರಿಸಿದ್ದಾರೆ.
ಇದನ್ನು ಓದಿ: ಹಬ್ಬದ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ
ಸೋಮವಾರ ಬೆಳಿಗ್ಗೆಯೂ ಹಾಸನಾಂಬ ದರ್ಶನ ಸುಗಮವಾಗಿ ನಡೆದಿದೆ. ಪೂಜಾ ಕಾರ್ಯಕ್ರಮದ ಕಾರಣ ಸೋಮವಾರ ಹಾಗೂ ಮಂಗಳವಾರ ಮಧ್ಯಾಹ್ನ ೨ – ೩.೩೦ ಗಂಟೆಯ ನಡುವೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಮಂಗಳವಾರ ದೀಪಾವಳಿ ವಿಶೇಷ ಪೂಜೆಯ ಕಾರಣಕ್ಕೆ ರಾತ್ರಿ ೯ ಗಂಟೆಗೆ ಸಾರ್ವಜನಿಕ ದರ್ಶನದ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ಬುಧವಾರ ಬೆಳಗಿನ ಜಾವ ೫.೩೦ಕ್ಕೆ ಪೂಜೆ ಮುಗಿಸಿದ ನಂತರ ಮತ್ತೆ ದರ್ಶನ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.
ಕೊನೆಯ ದಿನವಾದ ಬುಧವಾರ ಸಂಜೆ ೭ ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ಅದೇ ದಿನ ಸಂಜೆ ಸಿದ್ದೇಶ್ವರ ಸ್ವಾಮಿಯ ಜಾತ್ರೆ ನಡೆಯಲಿದೆ. ಗುರುವಾರ ಮಧ್ಯಾಹ್ನ ಶಾಸ್ತ್ರದ ಪ್ರಕಾರ ಪೂಜೆ ನೆರವೇರಿಸಿ ಮುಂದಿನ ವರ್ಷದವರೆಗೆ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಆದರೆ, ಈ ದಿನ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…