ಹಾಸನ : ಹಾಸನಾಂಬೆ ದರ್ಶನದ ವೇಳೆ ಕರ್ತವ್ಯ ಲೋಪ ಆರೋಪದ ಮೇಲೆ ಆರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ.
ಇಬ್ಬರು ಸಮಾಜ ಕಲ್ಯಾಣ ಹಾಗೂ ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿ ಅಮಾನತು ಮಾಡಲಾಗಿದೆ. ಗುರುತಿನ ಚೀಟಿ ದುರುಪಯೋಗದ ಆರೋಪದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯ ವಾರ್ಡನ್ ಗಳಾದ ರಮೇಶ್ ಮತ್ತು ಆನಂದ್ ಎಂಬ ಇಬ್ಬರು ಸಿಬ್ಬಂದಿಯನ್ನು ಜಿಲ್ಲಾಧಿಕಾರಿ ಕೆಎಸ್ ಲತಾ ಅಮಾನತುಗೊಳಿಸಿದ್ದಾರೆ.
ಇದನ್ನು ಓದಿ : ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ ; 2 ಕೋಟಿ ಆದಾಯ
ಇದು ಸ್ಪಷ್ಟ ನಿಯಮ ಉಲ್ಲಂಘನೆಯಾಗಿದೆ. ಸರ್ಕಾರದ ಗುರುತಿನ ಚೀಟಿಯನ್ನು ಬೇರೆಯವರಿಗೆ ನೀಡುವುದು ಗಂಭೀರ ಅಪರಾಧವಾಗಿದೆ. ಅವರ ಐಡಿ ಕಾರ್ಡ್ ನಲ್ಲಿ ಬೇರೆಯವರು ದೇವಾಲಯ ಪ್ರವೇಶಿಸಲು ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದರು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅಲ್ಲದೇ ಗೋಲ್ಡ್ ಕಾರ್ಡ್ ಕೌಂಟರ್ ನಲ್ಲಿ ಕಾರ್ಡ್ ಸ್ಕ್ಯಾನ್ ಮಾಡದೇ ಭಕ್ತರನ್ನು ಒಳಗಡೆ ಬಿಡಲಾಗಿದೆ ಎಂದು ಆರೋಪದ ಮೇಲೆ ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆರ್ ಐಗಳಾದ ಗೋವಿಂದ ರಾಜ್, ಯೋಗಾನಂದ್ ಮತ್ತು ಲೆಕ್ಕಾಧಿಕಾರಿಗಳಾದ ಸಂತೋಷ್ ಅಂಬಿಗರ, ಶಿರಾಜ್ ಮಹಿಮಾ ಪಟೇಲ್ ಅವರನ್ನು ತಕ್ಷಣದಿಂದ ಅಮಾನತು ಮಾಡುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಆದೇಶಿಸಿದ್ದಾರೆ. ಅಕ್ಟೋಬರ್ 23 ರಂದು ದೇವಿಯ ದರ್ಶನ ಮುಕ್ತಾಯವಾಗಲಿದೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…