ಹಾಸನ

ರೇವಣ್ಣ ನೇತೃತ್ವದಲ್ಲಿ ಹಾಸನದಲ್ಲಿ ಬೃಹತ್ ಸಮಾವೇಶ ; ಎಚ್.ಡಿ.ಕೆ

ಹಾಸನ : ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಆರೋಪಗಳು ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್.ಡಿ ರೇವಣ್ಣ ಕುಟುಂಬ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇದರಿಂದ ಜೆಡಿಎಸ್‌ ಕಾರ್ಯಕರ್ತರಲ್ಲೂ ಕೂಡ ಉತ್ಸಾಹ ಕುಗ್ಗಿದೆ. ಇದರಿಂದ ಪಕ್ಷ ಸಂಘಟನೆಗೆ ಭಾರೀ ಹೊಡೆತ ಸಹ ಬಿದ್ದಿದೆ. ಈಗಾಗಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ , ಪಕ್ಷ ಸಂಘಟನೆಗೆ ಚುರುಕು ನೀಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಹಾಸನದಲ್ಲಿ ರೇವಣ್ಣ ನೇತೃತ್ವದಲ್ಲಿ ಬೃಹತ್‌ ಸಮಾವೇಶ ಮಾಡಲು ನಿರ್ಧರಿಸಿದ್ದಾರೆ.

ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಾಸನದಲ್ಲಿ ಬೃಹತ್‌ ಸಮಾವೇಶ ಮಾಡುವಂತೆ ಶಾಸಕರ ಒತ್ತಾಯವಿದೆ. ಕಲಾಪ ಮುಗಿದ ನಂತರ ಹಾಸನದಲ್ಲಿ ರೇವಣ್ಣ ಅವರ ನೇತೃತ್ವದಲ್ಲಿ ಬೃಹತ್‌ ಸಮಾವೇಶ ಮಾಡುತ್ತೇನೆ. ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸ ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿದರು.

ಅಲ್ಲದೆ ಬೆಂಗಳೂರಿನ ಮದರ್‌ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ. ರೈತರಿಗೆ ಆರ್ಥಿಕ ಶಕ್ತಿ ತುಂಬಲು ಮೆಗಾ ಡೈರಿ ಮಾಡುತ್ತಿದ್ದಾರೆ. ರೇವಣ್ಣ ಅವರ ನೇತೃತ್ವದಲ್ಲಿ ಶಾಸಕರುಗಳನ್ನೊಳಗೊಂಡು ನಾನು ಸೇರಿದಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಹಾಸನ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇನೆ ಎಂದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

1 hour ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

1 hour ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

1 hour ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

1 hour ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

1 hour ago