ಹಾಸನ : ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಆರೋಪಗಳು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ ರೇವಣ್ಣ ಕುಟುಂಬ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರಲ್ಲೂ ಕೂಡ ಉತ್ಸಾಹ ಕುಗ್ಗಿದೆ. ಇದರಿಂದ ಪಕ್ಷ ಸಂಘಟನೆಗೆ ಭಾರೀ ಹೊಡೆತ ಸಹ ಬಿದ್ದಿದೆ. ಈಗಾಗಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ , ಪಕ್ಷ ಸಂಘಟನೆಗೆ ಚುರುಕು ನೀಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹಾಸನದಲ್ಲಿ ರೇವಣ್ಣ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡಲು ನಿರ್ಧರಿಸಿದ್ದಾರೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಾಸನದಲ್ಲಿ ಬೃಹತ್ ಸಮಾವೇಶ ಮಾಡುವಂತೆ ಶಾಸಕರ ಒತ್ತಾಯವಿದೆ. ಕಲಾಪ ಮುಗಿದ ನಂತರ ಹಾಸನದಲ್ಲಿ ರೇವಣ್ಣ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡುತ್ತೇನೆ. ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸ ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿದರು.
ಅಲ್ಲದೆ ಬೆಂಗಳೂರಿನ ಮದರ್ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ. ರೈತರಿಗೆ ಆರ್ಥಿಕ ಶಕ್ತಿ ತುಂಬಲು ಮೆಗಾ ಡೈರಿ ಮಾಡುತ್ತಿದ್ದಾರೆ. ರೇವಣ್ಣ ಅವರ ನೇತೃತ್ವದಲ್ಲಿ ಶಾಸಕರುಗಳನ್ನೊಳಗೊಂಡು ನಾನು ಸೇರಿದಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಹಾಸನ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇನೆ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…