ಹಾಸನ : ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಆರೋಪಗಳು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ ರೇವಣ್ಣ ಕುಟುಂಬ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರಲ್ಲೂ ಕೂಡ ಉತ್ಸಾಹ ಕುಗ್ಗಿದೆ. ಇದರಿಂದ ಪಕ್ಷ ಸಂಘಟನೆಗೆ ಭಾರೀ ಹೊಡೆತ ಸಹ ಬಿದ್ದಿದೆ. ಈಗಾಗಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ , ಪಕ್ಷ ಸಂಘಟನೆಗೆ ಚುರುಕು ನೀಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹಾಸನದಲ್ಲಿ ರೇವಣ್ಣ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡಲು ನಿರ್ಧರಿಸಿದ್ದಾರೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಾಸನದಲ್ಲಿ ಬೃಹತ್ ಸಮಾವೇಶ ಮಾಡುವಂತೆ ಶಾಸಕರ ಒತ್ತಾಯವಿದೆ. ಕಲಾಪ ಮುಗಿದ ನಂತರ ಹಾಸನದಲ್ಲಿ ರೇವಣ್ಣ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡುತ್ತೇನೆ. ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸ ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿದರು.
ಅಲ್ಲದೆ ಬೆಂಗಳೂರಿನ ಮದರ್ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ. ರೈತರಿಗೆ ಆರ್ಥಿಕ ಶಕ್ತಿ ತುಂಬಲು ಮೆಗಾ ಡೈರಿ ಮಾಡುತ್ತಿದ್ದಾರೆ. ರೇವಣ್ಣ ಅವರ ನೇತೃತ್ವದಲ್ಲಿ ಶಾಸಕರುಗಳನ್ನೊಳಗೊಂಡು ನಾನು ಸೇರಿದಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಹಾಸನ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇನೆ ಎಂದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…