ಹಾಸನ

ರೇವಣ್ಣ ನೇತೃತ್ವದಲ್ಲಿ ಹಾಸನದಲ್ಲಿ ಬೃಹತ್ ಸಮಾವೇಶ ; ಎಚ್.ಡಿ.ಕೆ

ಹಾಸನ : ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಆರೋಪಗಳು ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್.ಡಿ ರೇವಣ್ಣ ಕುಟುಂಬ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇದರಿಂದ ಜೆಡಿಎಸ್‌ ಕಾರ್ಯಕರ್ತರಲ್ಲೂ ಕೂಡ ಉತ್ಸಾಹ ಕುಗ್ಗಿದೆ. ಇದರಿಂದ ಪಕ್ಷ ಸಂಘಟನೆಗೆ ಭಾರೀ ಹೊಡೆತ ಸಹ ಬಿದ್ದಿದೆ. ಈಗಾಗಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ , ಪಕ್ಷ ಸಂಘಟನೆಗೆ ಚುರುಕು ನೀಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಹಾಸನದಲ್ಲಿ ರೇವಣ್ಣ ನೇತೃತ್ವದಲ್ಲಿ ಬೃಹತ್‌ ಸಮಾವೇಶ ಮಾಡಲು ನಿರ್ಧರಿಸಿದ್ದಾರೆ.

ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಾಸನದಲ್ಲಿ ಬೃಹತ್‌ ಸಮಾವೇಶ ಮಾಡುವಂತೆ ಶಾಸಕರ ಒತ್ತಾಯವಿದೆ. ಕಲಾಪ ಮುಗಿದ ನಂತರ ಹಾಸನದಲ್ಲಿ ರೇವಣ್ಣ ಅವರ ನೇತೃತ್ವದಲ್ಲಿ ಬೃಹತ್‌ ಸಮಾವೇಶ ಮಾಡುತ್ತೇನೆ. ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸ ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿದರು.

ಅಲ್ಲದೆ ಬೆಂಗಳೂರಿನ ಮದರ್‌ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ. ರೈತರಿಗೆ ಆರ್ಥಿಕ ಶಕ್ತಿ ತುಂಬಲು ಮೆಗಾ ಡೈರಿ ಮಾಡುತ್ತಿದ್ದಾರೆ. ರೇವಣ್ಣ ಅವರ ನೇತೃತ್ವದಲ್ಲಿ ಶಾಸಕರುಗಳನ್ನೊಳಗೊಂಡು ನಾನು ಸೇರಿದಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಹಾಸನ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇನೆ ಎಂದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

45 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

50 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

54 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago