ಹಾಸನ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ಅಧಿದೇವತೆ ಹಾಸನಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಸ್ವೀಕರಿಸಿದ್ದಾರೆ.
ದೇವಿಗೆ ಸೀರೆ, ಹೂವು, ಹಣ್ಣು ಗಳನ್ನು ಅರ್ಪಿಸಿ ಭಕ್ತಿ ಪೂರ್ವಕವಾಗಿ ನಮನಗಳನ್ನು ಸಲ್ಲಿಸಿ,ಕೆಲ ಕ್ಷಣ ಕುಮಾರಸ್ವಾಮಿ ದಂಪತಿ ಶಕ್ತಿ ದೇವಿ ಹಾಸನಾಂಬೆಯ ಮುಂದೆ ಧ್ಯಾನಸ್ಥರಾಗಿದ್ದರು. ಈ ವೇಳೆ ಕುಮಾರಸ್ವಾಮಿಯವರಿಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಾಥ್ ನೀಡಿದ್ದರು.
ದೇವೇಗೌಡರ ಕುಟುಂಬದ ಶಕ್ತಿ ದೇವತೆ ಎಂದೇ ಹೇಳಲಾಗುವ ಹಾಸನಾಂಬೆಯ ದರ್ಶನವನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕುಟುಂಬ ಸಮೇತ ಆಗಮಿಸಿ ಪಡೆದಿದ್ದರು. ಪತ್ನಿ ಚೆನ್ನಮ್ಮ ಜೊತೆಯಾಗಿ ಆಗಮಿಸಿದ್ದ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ದೇವಿಯ ಮುಂದೆ ಧ್ಯಾನಸ್ಥರಾಗಿ ಕುಳಿತು ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದರು.
ಅಲ್ಲದೆ ಹಾಸನಾಂಬೆಯ ದೇವಸ್ಥಾನದ ಬಾಗಿಲು ತೆರೆದ ಮರುದಿನವೇ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಪ್ತರ ಜೊತೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದರು.
ದೇವಿಯ ದರ್ಶನ ಆರಂಭವಾದ ದಿನದಿಂದಲೂ ನಿತ್ಯ ಭಕ್ತ ಸಾಗರ ದೇವಸ್ಥಾನದತ್ತ ಹರಿದು ಬರುತ್ತಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…