heart attack deaths increased in hassan district
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸರಣಿ ಸಾವುಗಳು ಸಂಭವಿಸುತ್ತಿದ್ದು, ಇಂದು ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಈ ಮೂಲಕ ಕಳೆದ 40 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನಿವಾಸಿ ಇಂಗ್ಲೀಷ್ ಪ್ರೊಫೆಸರ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತರನ್ನು ಮುತ್ತಯ್ಯ ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆ.ಪಿ.ನಗರದಲ್ಲಿ ಹೃದಯಾಘಾತಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದು, ಇವರನ್ನು ಲೇಪಾಕ್ಷಿ ಎಂದು ಗುರುತಿಸಲಾಗಿದೆ. ನನಗೆ ಸುಸ್ತು ಆಗುತ್ತಿದೆ ಎಂದಿದ್ದ ಲೇಪಾಕ್ಷಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ.
ಇನ್ನು ರಜೆಗೆಂದು ಊರಿಗೆ ಬಂದಿದ್ದ ಯೋಧ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕೆಂಬಾಳು ಗ್ರಾಮದ ಲೋಹಿತ್ ಎಂಬುವವರೇ ಮೃತ ಸೈನಿಕನಾಗಿದ್ದಾರೆ.
ಈ ಮೂಲಕ ಕಳೆದ 40 ದಿನಗಳಲ್ಲಿ 21 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇದರಲ್ಲಿ ಯುವಕರೇ ಹೆಚ್ಚಿನವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಜನತೆ ಭಯಭೀತರಾಗಿದ್ದು, ಆಸ್ಪತ್ರೆಯ ಮೊರೆ ಹೋಗುತ್ತಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…