ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ವೀಕೆಂಡ್ ಹಿನ್ನೆಲೆಯಲ್ಲಿ ದೇಗುಲಕ್ಕೆ ಬರುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ನಾಳೆ ದೇವಾಲಯಕ್ಕೆ ಬರುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲನ್ನು ಗುರುವಾರ ತೆರೆಯಲಾಗಿದ್ದು, ನಿನ್ನೆಯಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಅತಿಹೆಚ್ಚು ಮಂದಿ ದೇವಾಲಯಕ್ಕೆ ಆಗಮಿಸುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…