ಹಾಸನ

ಹಾಸನದ ಮಲೆನಾಡು ಭಾಗದಲ್ಲಿ ಮುಂದುವರೆದ ವರುಣನ ಆರ್ಭಟ

ಹಾಸನ : ಕಳೆದ ೫ ದಿನಗಳಲ್ಲಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಮಳೆಯ ಹೊಡೆತನಕ್ಕೆ ಜನರ ಜೀವನ ಅಸ್ಯವ್ಯಸ್ತಗೊಂಡಿದೆ. ಅದರಲ್ಲೂ ಮಲೆನಾಡು  ಭಾಗದ ಸಕಲೇಶಪುರ, ಆಲೂರು, ಬೇಲೂರು ಭಾಗಗಳಲ್ಲಿ ವರುಣನ ಆರ್ಭಟಕ್ಕೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ ನಲ್ಲಿ ವಾಹನ ಸಂಚಾರ ಕೂಡ ಬಂದ್‌ ಮಾಡಲಾಗಿದೆ.

ಪುನರ್ವಸು ಮಳೆಯ ಆರ್ಭಟಕ್ಕೆ ಹಾಸನ ಜನರು ತತ್ತರಿಸಿ ಹೋಗಿದ್ದು, ಜಿಲ್ಲೆಯ ಕಿರು ಸೇತುವೆಗಳು ತುಂಬಿ ಹರಿದು ಹಲವು ಗ್ರಾಮಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಲ್ಲದೆ  ಗ್ರಾಮಗಳಿಗೆ ತೆರಳಲು ಸಾಧ್ಯವಾಗದೆ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಕೆಲವು ಕಡೆ ಗಾಳಿ ಸಹಿತ ಸುರಿಯುತ್ತಿರುವ ಭಾರೀ ಮಳೆಗೆ ಬೃಹತ್‌ ಗಾತ್ರದ ಮರಗಳು, ವಿದ್ಯುತ್‌ ಕಂಬಗಳು ನೆಲಕ್ಕುರಿಳಿವೆ. ಸಕಲೇಶಪುರ ತಾಲೂಕಿನ ಬಿಸಿಲೆ, ಕಟ್ಟೆಪುರ, ಮಾಗೇರಿ, ಮಾರನಹಳ್ಳಿ, ಹಾನಬಾಳು, ಹಾಗೂ ಬೇಲೂರು ತಾಲೂಕಿನ ಬಿಕ್ಕೋಡು, ಮಾಳೆಗೆರೆ, ಕುಶಾವರ ಸೇರಿದಂತೆ ಇನ್ನೂ ಹಲವು ಗ್ರಾಮಗಳಲ್ಲಿ ಮೂರ್ನಾಲ್ಕು ದಿನಗಳಿಂದ ಕರೆಂಟ್‌ ಇಲ್ಲದೆ ತೊಂದರೆ ಅನುಭವಿಸಿದ್ದಾರೆ.

ಶಿರಾಡಿಘಾಟ್‌ ನ ದೊಡ್ಡತಪ್ಲು ಪ್ರದೇಶದಲ್ಲಿ ಭೂ ಕುಸಿತವಾಗಿರುವ ಕಾರಣ ರಸ್ತೆ ದುರಸ್ತಿ ಆಗುವವರೆಗೂ ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧಿಸಿ ಡಿಸಿ ಆದೇಶ ಮಾಡಿದ್ದಾರೆ. ಮಳೆ ಹೆಚ್ಚಾಗಿರುವ ಹಿನ್ನೆಲೆ ಮತ್ತಷ್ಟು ಭೂ ಕುಸಿತದ ಆತಂಕ ಇದ್ದು, ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್‌ ಮೂಲಕ ಸಂಚರಿಸಲು ಸೂಚಿಸಿಲಾಗಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಹಾಸನ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago