ಹಾಸನ: ಹಾಸನದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಕಾಫಿ ಬೆಳೆ ಕೊಳೆರೋಗಕ್ಕೆ ತುತ್ತಾಗಿದ್ದು, ಅನ್ನದಾತರು ತೀವ್ರ ಕಂಗಾಲಾಗಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ರೈತರು ಕೂಡ ಕಂಗಾಲಾಗಿದ್ದಾರೆ.
ಈ ಬಾರಿ ಕಾಫಿ ಬೆಳೆಯಲ್ಲಿ ಉತ್ತಮ ಆದಾಯ ಸಿಗಲಿದೆ ಎಂಬ ಆಸೆಯಲ್ಲಿದ್ದ ಅನ್ನದಾತರಿಗೆ ಮಳೆರಾಯ ತಣ್ಣೀರು ಎರಚಿದ್ದಾನೆ.
ಧಾರಾಕಾರ ಮಳೆಯಿಂದ ಕಾಫಿ ಬೆಳೆಗೆ ಕೊಳೆರೋಗ ಅಂಟಿದ್ದು, ಗಿಡದಲ್ಲಿ ಕಾಯಿಗಳು ಸಂಪೂರ್ಣ ಉದುರಿ ಹೋಗಿವೆ. ತೋಟದ ತುಂಬೆಲ್ಲಾ ನೆಲದ ಮೇಲೆ ಕಾಫಿ ಹಣ್ಣಾಗುವ ಮೊದಲೇ ಕಾಯಿಗಳಲ್ಲೇ ಉದುರಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ.
ಒಂದೆಡೆ ಮೇ-ಜೂನ್ನಲ್ಲಿ ಮಳೆ ರೈತರಿಗೆ ತೀವ್ರ ಖುಷಿ ತಂದಿತ್ತು. ಆದರೆ ಜುಲೈ ವೇಳೆಗೆ ದಾಖಲೆಯ ಧಾರಾಕಾರ ಮಳೆ ಸುರಿದಿದ್ದು, ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.
ಈ ಬಾರಿ ಕಾಫಿ ಬೆಳೆಯಿಂದ ಏನೂ ಪ್ರಯೋಜನವಿಲ್ಲ. ಹಣ್ಣಾಗುವ ಮೊದಲೇ ಕಾಫಿ ಕಾಯಿಗಳು ಉದುರಿ ಹೋಗಿವೆ. ಹೀಗಾಗಿ ನಮಗೆ ಭಾರೀ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಮಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕಾಫಿ ಬೆಳೆಗಾರರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…