ಹಾಸನ: ಹಾಸನದ ಗೊರೂರು ಅಣೆಕಟ್ಟು ತನ್ನ ಗರಿಷ್ಠ ಮಿತಿ ತಲುಪುವ ಹಂತದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಣೆಕಟ್ಟೆಯಿಂದ ಹೇಮಾವತಿ ನದಿಗೆ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ.
ಪರಿಣಾಮ ಹೇಮಾವತಿ ನದಿ ರೌದ್ರಾವತಾರ ತಾಳಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಭಾರೀ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನೂ ಹೇಮಾವತಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆ ತಮ್ಮ ತಮ್ಮ ಜಾನುವಾರುಗಳನ್ನು ಸಹ ಸ್ಥಳಾಂತರ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನದಿ ಬಳಿ ಮೀನುಗಾರರು ಮೀನು ಹಿಡಿಯಲು ತೆರಳಬಾರದು. ಒಂದು ವೇಳೆ ಸೂಚನೆಯನ್ನೂ ಮೀರಿ ನದಿಗೆ ತೆರಳಿದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ನದಿಗೆ ಬಳಿಗೆ ಬಟ್ಟೆ, ಪತ್ರೆ ತೊಳೆಯಲು ಹೋಗಬಾರದು. ನದಿಯಲ್ಲಿ ಸ್ನಾನ ಮಾಡುವುದಾಗಲಿ, ಈಜುವುದಾಗಲಿ ಮಾಡಬಾರದು ಎಂದು ಸೂಚನೆ ನೀಡಲಾಗಿದ್ದು, ನದಿಯ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಬಹಳ ವರ್ಷಗಳ ನಂತರ ಹೇಮಾವತಿಗೆ ಜೀವಕಳೆ ಬಂದಿರುವ ಹಿನ್ನೆಲೆಯಲ್ಲಿ ರೈತರು ಸಂತಸಗೊಂಡಿದ್ದು, ತುಂಬಿರುವ ನದಿಯ ಸೊಬಗನ್ನು ವೀಕ್ಷಿಸಲು ನದಿಯ ಬಳಿ ಜನರು ತೆರಳುತ್ತಿದ್ದಾರೆ.
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…
ಕುಶಾಲನಗರ: ಹಿಟ್ ಅಂಡ್ ರನ್ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್…
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್-ಇಸ್ರೇಲ್ ಸಂಘರ್ಷ…