ಹಾಸನ: ಹಾಸನದ ಗೊರೂರು ಅಣೆಕಟ್ಟು ತನ್ನ ಗರಿಷ್ಠ ಮಿತಿ ತಲುಪುವ ಹಂತದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಣೆಕಟ್ಟೆಯಿಂದ ಹೇಮಾವತಿ ನದಿಗೆ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ.
ಪರಿಣಾಮ ಹೇಮಾವತಿ ನದಿ ರೌದ್ರಾವತಾರ ತಾಳಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಭಾರೀ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನೂ ಹೇಮಾವತಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆ ತಮ್ಮ ತಮ್ಮ ಜಾನುವಾರುಗಳನ್ನು ಸಹ ಸ್ಥಳಾಂತರ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನದಿ ಬಳಿ ಮೀನುಗಾರರು ಮೀನು ಹಿಡಿಯಲು ತೆರಳಬಾರದು. ಒಂದು ವೇಳೆ ಸೂಚನೆಯನ್ನೂ ಮೀರಿ ನದಿಗೆ ತೆರಳಿದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ನದಿಗೆ ಬಳಿಗೆ ಬಟ್ಟೆ, ಪತ್ರೆ ತೊಳೆಯಲು ಹೋಗಬಾರದು. ನದಿಯಲ್ಲಿ ಸ್ನಾನ ಮಾಡುವುದಾಗಲಿ, ಈಜುವುದಾಗಲಿ ಮಾಡಬಾರದು ಎಂದು ಸೂಚನೆ ನೀಡಲಾಗಿದ್ದು, ನದಿಯ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಬಹಳ ವರ್ಷಗಳ ನಂತರ ಹೇಮಾವತಿಗೆ ಜೀವಕಳೆ ಬಂದಿರುವ ಹಿನ್ನೆಲೆಯಲ್ಲಿ ರೈತರು ಸಂತಸಗೊಂಡಿದ್ದು, ತುಂಬಿರುವ ನದಿಯ ಸೊಬಗನ್ನು ವೀಕ್ಷಿಸಲು ನದಿಯ ಬಳಿ ಜನರು ತೆರಳುತ್ತಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…