ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮತ್ತೆ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತಗೊಂಡಿದೆ.
ಹಾಸನದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ.
ಹಾಸನದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗುಡ್ಡ ಪ್ರದೇಶಗಳಲ್ಲಿ ವಾಸಿಸುವ ಜನರು ಭಾರೀ ಭಯಭೀತರಾಗಿದ್ದು, ಜೀವಭಯದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಣವಾಗಿದೆ.
ಇನ್ನೂ ಹಾಸನದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮತ್ತೆ ಭೂಕುಸಿತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ರಸ್ತೆ ಕುಸಿದಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಇನ್ನೂ ನಿನ್ನೆಯೂ ಕೂಡ ಸಕಲೇಶಪುರ ತಾಲ್ಲೂಕಿನ ಗುಲಗಳಲೆ ಬಳಿ ರಾಷ್ಟ್ರೀಯ ಹೆದ್ದಾರಿ ಕುಸಿದಿತ್ತು. ಹೀಗಿರುವಾಗಲೇ ಇಂದು ಮತ್ತೆ ಹೆದ್ದಾರಿ ಕುಸಿದಿದ್ದು, ಸ್ಥಳೀಯರು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…