ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು, ಹಳ್ಳಕೊಳ್ಳಗಳು ಸಂಪೂರ್ಣ ಜಲಾವೃತವಾಗಿವೆ.
ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗುಡ್ಡ ಕುಸಿತ, ತಡೆಗೋಡೆಗಳ ಕುಸಿತ, ಸಂಚಾರ ಸ್ಥಗಿತ, ವಿದ್ಯುತ್ ಕಡಿದಂತಹ ಹಲವಾರು ಸಮಸ್ಯೆಗಳು ಕಾಣಿಸಿಕೊಂಡಿವೆ. ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದು, ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ.
ಸಕಲೇಶಪುರದಲ್ಲಿ 50ಕ್ಕೂ ಹೆಚ್ಚು ರೆಸಾರ್ಟ್ಗಳಿದ್ದು, ಪ್ರವಾಸಿಗರಿಲ್ಲದೇ ರೆಸಾರ್ಟ್ ಮಾಲೀಕರು ತೀವ್ರ ಕಂಗಾಲಾಗಿದ್ದಾರೆ. ಸಕಲೇಶಪುರದಲ್ಲಿರುವ ಪ್ರವಾಸಿ ತಾಣಗಳಲ್ಲಿ ಸುರಕ್ಷತೆಯಿಲ್ಲ. ಹಾಗಾಗಿ ಇಲ್ಲಿಗೆ ಪ್ರವಾಸಿಗರು ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಈ ಹಿಂದೆ ಎಷ್ಟೇ ಮಳೆ ಇದ್ದರೂ ಈ ಭಾಗದಲ್ಲಿ ಏನೂ ಸಮಸ್ಯೆ ಇರಲಿಲ್ಲ. ಆದರೆ ಈಗ ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುತ್ತಿರುವುದರಿಂದ ರಸ್ತೆಗಳ ಮೇಲೆ ಗುಡ್ಡ ಕುಸಿಯುತ್ತಿವೆ. ಹಾಗಾಗಿ ಭಯದಿಂದಲೇ ಪ್ರವಾಸಿಗರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…