ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ.
ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ ಕುಸಿತಗೊಂಡಿರುವುದು ಗೊತ್ತಾಗಿದೆ.
ನಕ್ಷತ್ರಾಕಾರದ ಕೋಟೆ: ನಕ್ಷತ್ರಾಕಾರದಲ್ಲಿರುವ ಮಂಜರಾಬಾದ್ ಕೋಟೆ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ನೂರಾರು ಪ್ರವಾಸಿಗರು ಪ್ರತಿನಿತ್ಯ ಇಲ್ಲಿಗೆ ಭೇಟಿ ನೀಡುತ್ತಾರೆ. ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಹಾಗೂ ಐತಿಹಾಸಿಕ ಮಂಜರಾಬಾದ್ ಕೋಟೆಯನ್ನು 1792ರಲ್ಲಿ ಟಿಪ್ಪು ಸುಲ್ತಾನ್ ಕಟ್ಟಿಸಿದ್ದರು.
ಈ ಬೃಹತ್ ಕೋಟೆಯು ಸಮುದ್ರ ಮಟ್ಟದಿಂದ 988 ಮೀಟರ್ ಎತ್ತರದಲ್ಲಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಕೇಂದ್ರದಿಂದ 5 ಕಿ.ಮೀ. ಅಂತರದಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಅಡಾಣಿ ಗುಡ್ಡದ ಮೇಲೆ ಈ ಕೋಟೆ ನಿರ್ಮಾಣವಾಗಿದೆ.
ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…
ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …