ಹಾಸನ

ಹೇಮಾವತಿ ನದಿ ಪ್ರವಾಹಕ್ಕೆ ನಲುಗಿದ ಹಾಸನ ಜನತೆ

ಹಾಸನ: ಹಾಸನ ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಭಾರೀ ಮಳೆಯಿಂದ ಎಲ್ಲಿ ನೋಡಿದರೂ ಭೂಕುಸಿತ, ಪ್ರವಾಹದಂತೆ ಹರಿಯುತ್ತಿರುವ ನೀರು, ಮನೆಗಳ ಹಾನಿ, ರೈತರ ಫಸಲಿಗೆ ಭಾರೀ ಹಾನಿಮಾಡಿದೆ. ಹೇಮಾವತಿ ನದಿ ಪ್ರವಾಹಕ್ಕೆ ತಗ್ಗು ಪ್ರದೇಶದ ಜನರು ಭಾರೀ ಸಂಕಷ್ಟ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.

ಹಾಸನ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಭಾರೀ ಮಳೆಯಿಂದ ಹೆಚ್ಚಿನ ಅನಾಹುತ ಸಂಭವಿಸಿದ್ದು, ಸಕಲೇಶಪುರದಲ್ಲಿ ಮತ್ತಷ್ಟು ಭೂಕುಸಿತ ಉಂಟಾಗುವ ಆತಂಕ ಎದುರಾಗಿದೆ. ಶಿರಾಡಿ ಘಾಟ್‌ ಹೆದ್ದಾರಿಯಲ್ಲಿ ಸಂಚರಿಸಲು ವಾಹನ ಸವಾರರು ತೀವ್ರ ಪರದಾಟ ನಡೆಸುತ್ತಿದ್ದಾರೆ.

ಇನ್ನು ಹೇಮಾವತಿ ನದಿಯ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನದಿಗೆ ಬಿಡುವ ನೀರಿನ ಪ್ರಮಾಣವು ಹೆಚ್ಚಾಗಿದೆ. ಹೀಗಾಗಿ ಹೊಳೆನರಸೀಪುರ ಹಾಗೂ ಸಕಲೇಶಪುರದ ಅನೇಕ ಗ್ರಾಮಗಳು ಜಲಾವೃತವಾಗಿದ್ದು, ಪ್ರಮುಖ ರಸ್ತೆಗಳಂತೂ ಹೊಳೆಯಂತಾಗಿವೆ.

ಇನ್ನೊಂದೆಡೆ ಹೇಮಾವತಿ ನದಿಯ ನೀರು ಬಡಾವಣೆಗಳಿಗೂ ನುಗ್ಗಿದ್ದು, ಹಲವು ಬಡಾವಣೆಗಳು ಸಂಪೂರ್ಣ ಮುಳುಗಡೆಯಾಗಿವೆ. ಸಕಲೇಶಪುರದಲ್ಲಿ ಎಲ್ಲಿ ನೋಡಿದರೂ ಹೇಮಾವತಿ ನದಿಯ ನೀರು ಕಾಣುತ್ತಿದ್ದು, ಅಗತ್ಯ ವಸ್ತುಗಳನ್ನು ಕೊಳ್ಳಲು ಸಹ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

1 hour ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

1 hour ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

1 hour ago