ಚಿಕ್ಕಮಗಳೂರು : ಭಾರೀ ಮಳೆಯಿಂದಾಗಿ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಪಶ್ಚಿಮ ಘಟ್ಟಗಳ ದಟ್ಟ ಸಾಲಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಅಪಾಯದ ಮಟ್ಟ ಮೀರಿ ತುಂಗಾ, ಭದ್ರೆ ನದಿಗಳು ಭೋರ್ಗರೆಯುತ್ತಿದೆ. ಇತ್ತ ಶೃಂಗೇರಿಯಲ್ಲಿ ನೆರೆ ಆತಂಕ ಸೃಷ್ಟಿಯಾಗಿದ್ದು, ಈ ನಡುವೆ ಗುಡ್ಡ ಕುಸಿತಗಳು ಜನರನ್ನು ಭಯಭೀತರನ್ನಾಗಿಸುತ್ತಿವೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿರುವದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಶೃಂಗೇರಿ ಭಾಗದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಾಗಿದ್ದು ತುಂಗಾ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ. ಶೃಂಗೇರಿ ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಜಲಾವೃತವಾಗಿದ್ದು, ಮಠದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿ ತುಂಗಾ ನದಿ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಶೃಂಗೇರಿ ದೇವಾಲಯ ಸಮೀಪದ ತುಂಗಾ ನದಿಯ ತೀರದಲ್ಲಿರುವ ಕಪ್ಪೆ ಶಂಕರ ದೇವಾಲಯ ಸಂಪೂರ್ಣ ಮುಳುಗಡೆಯಾಗಿದೆ. ಮಳೆ ಹೀಗೆ ಮುಂದುವರೆದರೇ ಶೃಂಗೇರಿ ಶಾರದಾ ಮಠದ ಸುತ್ತಮುತ್ತಲಿನ ಇನ್ನಷ್ಟು ಪ್ರದೇಶ ಜಲಾವೃತವಾಗುವ ಆತಂಕ ಸೃಷ್ಟಿಯಾಗಿದೆ.
ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಚಿಕ್ಕಮಗಳೂರು ತಾಲೂಕಿನ ವಿವಿಧ ಕಡೆ ಮನೆಗಳು ಸಹ ಕುಸಿದಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…