ಹಾಸನ

ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್‌

ಚಿಕ್ಕಮಗಳೂರು : ಭಾರೀ ಮಳೆಯಿಂದಾಗಿ  ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಪಶ್ಚಿಮ ಘಟ್ಟಗಳ ದಟ್ಟ ಸಾಲಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಅಪಾಯದ ಮಟ್ಟ ಮೀರಿ ತುಂಗಾ, ಭದ್ರೆ ನದಿಗಳು ಭೋರ್ಗರೆಯುತ್ತಿದೆ.  ಇತ್ತ ಶೃಂಗೇರಿಯಲ್ಲಿ ನೆರೆ ಆತಂಕ ಸೃಷ್ಟಿಯಾಗಿದ್ದು, ಈ  ನಡುವೆ ಗುಡ್ಡ ಕುಸಿತಗಳು ಜನರನ್ನು ಭಯಭೀತರನ್ನಾಗಿಸುತ್ತಿವೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿರುವದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಶೃಂಗೇರಿ ಭಾಗದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಾಗಿದ್ದು ತುಂಗಾ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ. ಶೃಂಗೇರಿ ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಜಲಾವೃತವಾಗಿದ್ದು, ಮಠದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿ ತುಂಗಾ ನದಿ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಶೃಂಗೇರಿ ದೇವಾಲಯ ಸಮೀಪದ ತುಂಗಾ ನದಿಯ ತೀರದಲ್ಲಿರುವ ಕಪ್ಪೆ ಶಂಕರ ದೇವಾಲಯ ಸಂಪೂರ್ಣ ಮುಳುಗಡೆಯಾಗಿದೆ. ಮಳೆ ಹೀಗೆ ಮುಂದುವರೆದರೇ ಶೃಂಗೇರಿ ಶಾರದಾ ಮಠದ ಸುತ್ತಮುತ್ತಲಿನ ಇನ್ನಷ್ಟು ಪ್ರದೇಶ ಜಲಾವೃತವಾಗುವ ಆತಂಕ ಸೃಷ್ಟಿಯಾಗಿದೆ.

ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಚಿಕ್ಕಮಗಳೂರು ತಾಲೂಕಿನ ವಿವಿಧ ಕಡೆ ಮನೆಗಳು ಸಹ ಕುಸಿದಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

36 mins ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

1 hour ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

1 hour ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

2 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

5 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

6 hours ago