ಹಾಸನ

ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್‌

ಚಿಕ್ಕಮಗಳೂರು : ಭಾರೀ ಮಳೆಯಿಂದಾಗಿ  ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಪಶ್ಚಿಮ ಘಟ್ಟಗಳ ದಟ್ಟ ಸಾಲಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಅಪಾಯದ ಮಟ್ಟ ಮೀರಿ ತುಂಗಾ, ಭದ್ರೆ ನದಿಗಳು ಭೋರ್ಗರೆಯುತ್ತಿದೆ.  ಇತ್ತ ಶೃಂಗೇರಿಯಲ್ಲಿ ನೆರೆ ಆತಂಕ ಸೃಷ್ಟಿಯಾಗಿದ್ದು, ಈ  ನಡುವೆ ಗುಡ್ಡ ಕುಸಿತಗಳು ಜನರನ್ನು ಭಯಭೀತರನ್ನಾಗಿಸುತ್ತಿವೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿರುವದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಶೃಂಗೇರಿ ಭಾಗದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಾಗಿದ್ದು ತುಂಗಾ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ. ಶೃಂಗೇರಿ ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಜಲಾವೃತವಾಗಿದ್ದು, ಮಠದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿ ತುಂಗಾ ನದಿ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಶೃಂಗೇರಿ ದೇವಾಲಯ ಸಮೀಪದ ತುಂಗಾ ನದಿಯ ತೀರದಲ್ಲಿರುವ ಕಪ್ಪೆ ಶಂಕರ ದೇವಾಲಯ ಸಂಪೂರ್ಣ ಮುಳುಗಡೆಯಾಗಿದೆ. ಮಳೆ ಹೀಗೆ ಮುಂದುವರೆದರೇ ಶೃಂಗೇರಿ ಶಾರದಾ ಮಠದ ಸುತ್ತಮುತ್ತಲಿನ ಇನ್ನಷ್ಟು ಪ್ರದೇಶ ಜಲಾವೃತವಾಗುವ ಆತಂಕ ಸೃಷ್ಟಿಯಾಗಿದೆ.

ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಚಿಕ್ಕಮಗಳೂರು ತಾಲೂಕಿನ ವಿವಿಧ ಕಡೆ ಮನೆಗಳು ಸಹ ಕುಸಿದಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

15 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago