ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ.
ರಾಧಾ ಎಂಬುವವರೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾರೆ. ಪತಿ ಕುಮಾರ ಎಂಬುವವನೇ ಹತ್ಯೆ ಮಾಡಿದ ಪತಿಯಾಗಿದ್ದಾನೆ.
ಕಳೆದ ನಾಲ್ಕು ವರ್ಷಗಳಿಂದ ರಾಧಾ ಪತಿಯಿಂದ ದೂರವಿದ್ದು ಬೇರೆ ಮನೆಯಲ್ಲಿ ವಾಸವಾಗಿದ್ದರು. ಹೀಗಿರುವಾಗಲೇ ಪತಿ ಕುಮಾರ ಎರಡನೇ ಮದುವೆಯಾಗಿರುವ ವಿಚಾರ ರಾಧಾಗೆ ತಿಳಿದಿತ್ತು.
ಜನವರಿ.10ರ ರಾತ್ರಿ ಯಡೂರಿಗೆ ರಾಧಾ ಬಂದಿದ್ದರು. ಅದೇ ದಿನ ರಾತ್ರಿ ರಾಧಾರನ್ನು ಕುಮಾರ ಮನೆಯಲ್ಲಿಯೇ ಹತ್ಯೆ ಮಾಡಿ ಯಗಚಿ ನದಿಗೆ ಬಿಸಾಡಿದ್ದ. ಬಳಿಕ ಪೊಲೀಸರಿಗೆ ತಾನೇ ಮಾಹಿತಿ ನೀಡಿದ್ದ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…