ಹಾಸನ

ಇಡೀ ರಾಜ್ಯಕ್ಕೆ ಒಳಿತಾಗುವಂತೆ ಹಾಸನಾಂಬೆ ದೇವಿ ಬಳಿ ಪ್ರಾರ್ಥನೆ ಸಲ್ಲಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಹಾಸನ: ಹಾಸನಾಂಬೆ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು.

ಹಾಸನಾಂಬ ದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಕಳೆದ ವರ್ಷವೂ ದರ್ಶನ ಪಡೆದಿದ್ದೆ. ಈ ವರ್ಷವೂ ದರ್ಶನ‌ ಪಡೆದಿದ್ದೇನೆ. ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿಗಾಗಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.

ಇದನ್ನು ಓದಿ: ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಈ ಬಾರಿ ಅಗತ್ಯಕ್ಕಿಂತ ಹೆಚ್ವು ಮಳೆ ಬಿದ್ದು ರೈತರಿಗೆ ಆಗಿರುವ ನಷ್ಟ ಭರಿಸಲು NDRF ನಿಧಿ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರ ನೀಡುತ್ತಿದ್ದೇವೆ. ಹಿಂದೆಂದೂ ಯಾರೂ ನೀಡದಷ್ಟು ಬೆಳೆ ಹಾನಿ ಪರಿಹಾರವನ್ನು ನಾವು ನೀಡಿದ್ದೇವೆ. ಮುಂದಿನ ವರ್ಷ ಬೆಳೆ ಹಾನಿ ಪರಿಸ್ಥಿತಿ ಬರದಿರಲಿ ಎಂದು ಹಾಸನಾಂಬ ಮತ್ತು ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ನಮ್ಮದು ಕುವೆಂಪು ಅವರ ಆಶಯದ “ಸರ್ವ ಜನಾಂಗದ ಶಾಂತಿಯ ತೋಟ” ಆಗಿದೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸೋಣ. ಎಲ್ಲಾ ಧರ್ಮದ ದೇವರ ಆಶಯವೂ ಮನುಷ್ಯ ಪ್ರೀತಿ ಮತ್ತು ಸೌಹಾರ್ದದ ಬದುಕು. ಇದಕ್ಕೆ ತಕ್ಕಂತೆ ನಾವೆಲ್ಲರೂ ಸಹೃದತೆಯಿಂದ ಮನುಷ್ಯ ಧರ್ಮವನ್ನು ಪಾಲಿಸಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

8 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

9 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

10 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

10 hours ago