ಹಾಸನ : ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಕೊಂದು ತಿಂದಿರುವ ಘಟನೆ ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟಿ.ಮಾಯಗೌಡನಹಳ್ಳಿ ಗ್ರಾಮದ ನೂತನ್ ಎನ್ನುವವರ ಮನೆಯ ಅಂಗಳಕ್ಕೆ ಬಂದಿರುವ ಚಿರತೆ ಬಾಗಿಲಲ್ಲಿ ಕಟ್ಟಿದ್ದ ನಾಯಿಯನ್ನು ಮೊದಲು ಕೊಂದು ಹಾಕಿದೆ. ಬಳಿಕ ಅದನ್ನು ಹೊತ್ತೊಯ್ಯಲು ಹರಸಾಹಸ ಪಟ್ಟಿದೆ. ಕಟ್ಟಿ ಹಾಕಿದ್ದರಿಂದ ನಾಯಿಯನ್ನು ಬಿಡಿಸಲಾಗದೇ ಅಲ್ಲೇ ತಿಂದು ಹಾಕಿದೆ. ಈ ರೀತಿ ಚಿರತೆ ಮನೆ ಹತ್ತಿರ ಬಂದು ನಾಯಿಯನ್ನು ತಿನ್ನುತ್ತಿರುವುದು ಇದೇ 2ನೇ ಬಾರಿಯಾಗಿದೆ.
ಸದ್ಯ ಚಿರತೆ ಮನೆಯಂಗಳಕ್ಕೆ ಬಂದು ನಾಯಿಯನ್ನು ತಿನ್ನುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೊಂದು ಕಡೆ ಕೂಡ ವೆಂಕಟೇಶ್ ಎನ್ನುವರಿಗೆ ಸೇರಿದ್ದ ಕರುವನ್ನು ತಿಂದು ಹಾಕಿದೆ. ಸದ್ಯ ಈ ಘಟನೆಗಳಿಂದ ಗ್ರಾಮಸ್ಥರು ಆತಂಕಗೊಂಡಿದ್ದು ಕೂಡಲೇ ಚಿರತೆಯನ್ನು ಹಿಡಿಯಬೇಕು ಎಂದು ಅರಣ್ಯ ಇಲಾಖೆಗೆ ಒತ್ತಾಯ ಮಾಡಿದ್ದಾರೆ.
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…