ಹಾಸನ : ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಕೊಂದು ತಿಂದಿರುವ ಘಟನೆ ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟಿ.ಮಾಯಗೌಡನಹಳ್ಳಿ ಗ್ರಾಮದ ನೂತನ್ ಎನ್ನುವವರ ಮನೆಯ ಅಂಗಳಕ್ಕೆ ಬಂದಿರುವ ಚಿರತೆ ಬಾಗಿಲಲ್ಲಿ ಕಟ್ಟಿದ್ದ ನಾಯಿಯನ್ನು ಮೊದಲು ಕೊಂದು ಹಾಕಿದೆ. ಬಳಿಕ ಅದನ್ನು ಹೊತ್ತೊಯ್ಯಲು ಹರಸಾಹಸ ಪಟ್ಟಿದೆ. ಕಟ್ಟಿ ಹಾಕಿದ್ದರಿಂದ ನಾಯಿಯನ್ನು ಬಿಡಿಸಲಾಗದೇ ಅಲ್ಲೇ ತಿಂದು ಹಾಕಿದೆ. ಈ ರೀತಿ ಚಿರತೆ ಮನೆ ಹತ್ತಿರ ಬಂದು ನಾಯಿಯನ್ನು ತಿನ್ನುತ್ತಿರುವುದು ಇದೇ 2ನೇ ಬಾರಿಯಾಗಿದೆ.
ಸದ್ಯ ಚಿರತೆ ಮನೆಯಂಗಳಕ್ಕೆ ಬಂದು ನಾಯಿಯನ್ನು ತಿನ್ನುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೊಂದು ಕಡೆ ಕೂಡ ವೆಂಕಟೇಶ್ ಎನ್ನುವರಿಗೆ ಸೇರಿದ್ದ ಕರುವನ್ನು ತಿಂದು ಹಾಕಿದೆ. ಸದ್ಯ ಈ ಘಟನೆಗಳಿಂದ ಗ್ರಾಮಸ್ಥರು ಆತಂಕಗೊಂಡಿದ್ದು ಕೂಡಲೇ ಚಿರತೆಯನ್ನು ಹಿಡಿಯಬೇಕು ಎಂದು ಅರಣ್ಯ ಇಲಾಖೆಗೆ ಒತ್ತಾಯ ಮಾಡಿದ್ದಾರೆ.
ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…
ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್ ಪವಾರ್…
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ನ 131ನೇ ಸಂಚಿಕೆಯಲ್ಲಿ…
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…