ಹಾಸನ : ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಕೊಂದು ತಿಂದಿರುವ ಘಟನೆ ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಟಿ.ಮಾಯಗೌಡನಹಳ್ಳಿ ಗ್ರಾಮದ ನೂತನ್ ಎನ್ನುವವರ ಮನೆಯ ಅಂಗಳಕ್ಕೆ ಬಂದಿರುವ ಚಿರತೆ ಬಾಗಿಲಲ್ಲಿ ಕಟ್ಟಿದ್ದ ನಾಯಿಯನ್ನು ಮೊದಲು ಕೊಂದು ಹಾಕಿದೆ. ಬಳಿಕ ಅದನ್ನು ಹೊತ್ತೊಯ್ಯಲು ಹರಸಾಹಸ ಪಟ್ಟಿದೆ. ಕಟ್ಟಿ ಹಾಕಿದ್ದರಿಂದ ನಾಯಿಯನ್ನು ಬಿಡಿಸಲಾಗದೇ ಅಲ್ಲೇ ತಿಂದು ಹಾಕಿದೆ. ಈ ರೀತಿ ಚಿರತೆ ಮನೆ ಹತ್ತಿರ ಬಂದು ನಾಯಿಯನ್ನು ತಿನ್ನುತ್ತಿರುವುದು ಇದೇ 2ನೇ ಬಾರಿಯಾಗಿದೆ.
ಸದ್ಯ ಚಿರತೆ ಮನೆಯಂಗಳಕ್ಕೆ ಬಂದು ನಾಯಿಯನ್ನು ತಿನ್ನುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೊಂದು ಕಡೆ ಕೂಡ ವೆಂಕಟೇಶ್ ಎನ್ನುವರಿಗೆ ಸೇರಿದ್ದ ಕರುವನ್ನು ತಿಂದು ಹಾಕಿದೆ. ಸದ್ಯ ಈ ಘಟನೆಗಳಿಂದ ಗ್ರಾಮಸ್ಥರು ಆತಂಕಗೊಂಡಿದ್ದು ಕೂಡಲೇ ಚಿರತೆಯನ್ನು ಹಿಡಿಯಬೇಕು ಎಂದು ಅರಣ್ಯ ಇಲಾಖೆಗೆ ಒತ್ತಾಯ ಮಾಡಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…