ಹಾಸನ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ವೃತ್ತಿ ಜೀವನಕ್ಕೆ ಹಾಜರಾಗುವೆ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ಭಾನುವಾರ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ.
ಹರ್ಷಭರ್ಧನ್ ಮೃತ ಐಪಿಎಸ್ ಅಧಿಕಾರಿ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಮೈಸೂರಿನ ದಕ್ಷಿಣ ವಲಯ ಐಜಿ ಅವರ ಬಳಿ ವರದಿ ಮಾಡಿಕೊಂಡು ಹಾಸನಕ್ಕೆ ಜೀಪ್ ನಲ್ಲಿ ಬರುವಾಗ ಕಿತ್ತಾನೆ ಬಳಿ ಸಂಜೆ 4.30 ರ ವೇಳೆಗೆ ಜೀಪ್ ನ ಟೈರ್ ಸ್ಫೋಟವಾದ ಕಾರಣ ಜೀಪ್ ಮೂರು ಸುತ್ತು ಉರುಳಿ ಅದರಲ್ಲಿ ಪ್ರಯಾಣಿಸುತ್ತಿದ್ದ ಹರ್ಷಬರ್ಧನ್ ತಲೆಗೆ ಹಾಗೂ ದೇಹದ ಇನ್ನಿತರ ಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದಿತ್ತು.
ಜೀಪ್ ಚಾಲಕ ಮಂಜೇಗೌಡರಿಗೂ ಗಾಯಗಳಾಗಿದ್ದು, ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ. ಆದರೂ ಚಿಕಿತ್ಸೆ ಫಲಿಸದೆ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ತನ್ನ ವೃತ್ತಿ ಜೀವನಕ್ಕೆ ಹಾಜರಾಗುವ ಮುನ್ನ ಇಹಲೋಕ ತ್ಯಜಿಸಿದ್ದಾರೆ.
ಮೂಲತಃ ಬಿಹಾರದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಇಂಜಿನಿಯರಿಂಗ್ ಪದವಿ ಪಡೆದು 2022-23ರ ಐಪಿಎಸ್ ಬ್ಯಾಚ್ನಲ್ಲಿ ತೇರ್ಗಡೆ ಹೊಂದಿದ್ದ ಇವರು ಕರ್ನಾಟಕ ಕೇಡರ್ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೃತರ ತಂದೆ ಕೂಡ ಐಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…