ಹಾಸನ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಜಿಲ್ಲಾಡಳಿತಗಳು ಸಹಾಯವಾಣಿಯನ್ನು ಆರಂಭಿಸಿದ್ದು, ಜನರು ಸಿಲುಕಿದ್ದರೆ ಅವರ ಕುಟುಂಬದವರು, ಸಂಬಂಧಿಕರು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದೆ.
ಹಾಸನ ಜಿಲ್ಲಾಡಳಿತ ಸಹಾಯವಾಣಿ ಆರಂಭಿಸಿದ್ದು, ಇರಾನ್ ಹಾಗೂ ಇಸ್ರೇಲ್ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು, ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತಿದೆ ಎಂದು ಹೇಳಿದೆ.
ಹಾಸನ ಜಿಲ್ಲೆಯ ಸಾರ್ವಜನಿಕರು ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಕೂಡಲೇ ಹಾಸನ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಅಥವಾ ದೂರವಾಣಿ ಸಂಖ್ಯೆ 08172-261111, ಟೋಲ್ ಫ್ರೀಂ 08172-1077 ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…