ಹಾಸನ

ಬಳ್ಳೆಯಲ್ಲಿ 23ರಂದು ಅರ್ಜುನ ಸ್ಮಾರಕ ಉದ್ಘಾಟಿಸಲಿರುವ ಈಶ್ವರ ಖಂಡ್ರೆ

ಬೆಂಗಳೂರು : ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು ನಾಗರಹೊಳೆ ಅರಣ್ಯದ ಡಿ.ಬಿ. ಕುಪ್ಪೆಯ ಬಳ್ಳೆ ಶಿಬಿರದಲ್ಲಿ ಜೂ.23ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಸಲಿದ್ದಾರೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ 2023ರ ಡಿಸೆಂಬರ್ 4ರಂದು ಹುತಾತ್ಮನಾದ ಕ್ಯಾಪ್ಟನ್ ಎಂದೇ ಖ್ಯಾತವಾಗಿದ್ದ ದಸರಾ ಆನೆ ಅರ್ಜುನನ್ನು ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ ಸಮಾಧಿ ಮಾಡಲಾಗಿತ್ತು.

ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿದ್ದ ಈಶ್ವರ ಖಂಡ್ರೆ ಅವರು ದಬ್ಬಳ್ಳಿಕಟ್ಟೆಯಲ್ಲಿ ಮತ್ತು ಅರ್ಜುನ ವಾಸವಾಗಿದ್ದ ಬಳ್ಳೆ ಶಿಬಿರದಲ್ಲಿ ಸ್ಮಾರಕವನ್ನು ನಿರ್ಮಿಸುವುದಾಗಿ ಹೇಳಿದ್ದರು.

ಈಗ ಎರಡೂ ಕಡೆ ಸ್ಮಾರಕ ಸಿದ್ಧವಾಗಿದ್ದು, ಸೋಮವಾರ ಬಳ್ಳೆಯಲ್ಲಿ ಮೊದಲಿಗೆ ಸ್ಮಾರಕದ ಉದ್ಘಾಟನೆ ನೆರವೇರಲಿದೆ.

1968ರಲ್ಲಿ ಕಾಕನಕೋಟೆಯಲ್ಲಿ ನಡೆದ ಖೆಡ್ಡಾ ಕಾರ್ಯಾಚರಣೆಯಲ್ಲಿ ಅರ್ಜುನನನ್ನು ಸೆರೆಹಿಡಿಯಲಾಗಿತ್ತು. ಅಲ್ಲಿ ಪಳಗಿದ ನಂತರ, 1990 ರ ದಶಕದಿಂದ ಮೈಸೂರಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದ ಅರ್ಜುನ 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು, ಜನಮನ ಗೆದ್ದಿದ್ದ.

ಅರ್ಜುನ ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

3 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

7 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

8 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

9 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

9 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

9 hours ago