Mysore
23
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

ಹಾಸನ: ನಾಳೆ ಜನಕಲ್ಯಾಣ ಸಮಾವೇಶ

ಹಾಸನ: ಕೆಪಿಸಿಸಿ ಹಾಗೂ ಸ್ವಾಭಿಮಾನಿ ಸಂಘಟನೆಗಳ ಸಹಯೋಗದಲ್ಲಿ ಹಾಸನದಲ್ಲಿ ಜನಕಲ್ಯಾಣ ಸಮಾವೇಶವನ್ನು ನಾಳೆ(ಡಿ.5) ಆಯೋಜಿಸಲಾಗಿದೆ. ಈ ಬಗ್ಗೆ ಸಿದ್ಧತೆಗಳು ಪೂರ್ಣಗೊಂಡಿವೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌, ಸಚಿವ ಸಂಪುಟದ ಸದಸ್ಯರು, ಮುಖಂಡರು ಭಾಗವಹಿಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ನೇತೃತ್ವದಲ್ಲಿಯೇ ಈ ಸಮಾವೇಶ ನಡೆಯಲಿದ್ದು, ಸುಮಾರು 1 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ.

70 ಸಾವಿರ ಮಂದಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಸುಮಾರು 2 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ನಗರದಾದ್ಯಂತ ಫ್ಲೆಕ್ಸ್‌, ಬಂಟಿಂಗ್‌ಗಳು ರಾರಾಜಿಸುತ್ತಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಜನಕಲ್ಯಾಣಕ್ಕಾಗಿ ಆರಂಭಿಸಿರುವ ಯೋಜನೆಗಳ ಕುರಿತು ಜನರಿಗೆ ಮನವರಿಗೆ ಮಾಡಲು ಹಾಗೂ ಜನರಿಂದ ಸಲಹೆಗಳನ್ನು ಸ್ವೀಕರಿಸಲು ಸಮಾವೇಶ ಆಯೋಜಿಸಲಾಗುತ್ತದೆ ಎಂದು ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ.

Tags:
error: Content is protected !!