ಹಾಸನ: ಕೆಪಿಸಿಸಿ ಹಾಗೂ ಸ್ವಾಭಿಮಾನಿ ಸಂಘಟನೆಗಳ ಸಹಯೋಗದಲ್ಲಿ ಹಾಸನದಲ್ಲಿ ಜನಕಲ್ಯಾಣ ಸಮಾವೇಶವನ್ನು ನಾಳೆ(ಡಿ.5) ಆಯೋಜಿಸಲಾಗಿದೆ. ಈ ಬಗ್ಗೆ ಸಿದ್ಧತೆಗಳು ಪೂರ್ಣಗೊಂಡಿವೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಮುಖಂಡರು ಭಾಗವಹಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿಯೇ ಈ ಸಮಾವೇಶ ನಡೆಯಲಿದ್ದು, ಸುಮಾರು 1 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ.
70 ಸಾವಿರ ಮಂದಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಸುಮಾರು 2 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ನಗರದಾದ್ಯಂತ ಫ್ಲೆಕ್ಸ್, ಬಂಟಿಂಗ್ಗಳು ರಾರಾಜಿಸುತ್ತಿವೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನಕಲ್ಯಾಣಕ್ಕಾಗಿ ಆರಂಭಿಸಿರುವ ಯೋಜನೆಗಳ ಕುರಿತು ಜನರಿಗೆ ಮನವರಿಗೆ ಮಾಡಲು ಹಾಗೂ ಜನರಿಂದ ಸಲಹೆಗಳನ್ನು ಸ್ವೀಕರಿಸಲು ಸಮಾವೇಶ ಆಯೋಜಿಸಲಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…