ಹಾಸನ: ಹೊತ್ತ ಹರಕೆ ತೀರಿಸಿ ಬಂದ ಆ ಹೆಣ್ಣು ಮಗಳನ್ನು ಬಿಡಲಿಲ್ಲ ಯಮರಾಜ. ಇಡಿ ಕುಟುಂಬವನ್ನೇ ಬಲಿಪಡೆಯುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ.
ಕೆಲಸಕ್ಕೆ ಸೇರುವ ಮೊದಲು ದೇವರ ದರ್ಶನ ಮಾಡಲು ಹೋದವರು ವಾಪಾಸಾಗುವಾಗ ಮಸಣ ಸೇರಿದ ಮನಕಲಕುವ ಘಟನೆಯಾಗಿದೆ. ಕುಮಾರಸ್ವಾಮಿ ಪುತ್ರಿ ಚೈತ್ರಾ ಮುಂದಿನ ವಾರ ಕೆಲಸಕ್ಕೆ ಹಾಜರಾಗಬೇಕಿತ್ತು. ಆದರೆ ಅದಕ್ಕೆ ಮೊದಲೇ ಅವರು ಮಕ್ಕಳ ಸಹಿತ ಮೃತಪಟ್ಟಿದ್ದಾರೆ.
ಮಂಜುನಾಥನ ದರ್ಶನ ಮಾಡಿ ಕೇಲವ 3-4 ಗಂಟೆಯಾಗಿತ್ತು. ಒಂದೆರೆಡು ಕಿಲೋ ಮೀಟರ್ ಹೋಗಿದ್ದರೆ ನೆಮ್ಮದಿಯಾಗಿ ಮನೆಯನ್ನು ತಲುಪುತ್ತಿದ್ದರು. ಆದರೆ ಜವರಾಯ ಹಾಲಿನ ಟ್ಯಾಂಕರ್ ಸಾಗುವ ದಿಕ್ಕಿನಲ್ಲಿ ಸಾಗದೇ, ವಿರುದ್ದ ದಿಕ್ಕಿನಲ್ಲಿ ಬಂದಿದ್ದರಿಂದ ಒಂಬತ್ತು ಜೀವಗಳನ್ನು ಸ್ಥಳದಲ್ಲಿಯೇ ಬಲಿ ತೆಗೆದುಕೊಂಡಿದೆ. ಇಂತಹುದೊಂದು ಘಟನೆ ಅರಸೀಕರೆಯ ಬಾಣಾವಾರದಲ್ಲಿ ನಡೆದಿದೆ. ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ನವೀನ್ ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…