ಹಾಸನ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ಗ್ರಾಮದ ಹೂವಣ್ಣ ಎಂಬುವವರಿಗೆ ಸೇರಿದ್ದ ಕರುವನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಹೊತ್ತೊಯ್ದು ಮಾಂಸದೂಟ ಮಾಡಿದ್ದಾರೆ.
ಕಳೆದ ಮಂಗಳವಾರದಿಂದಲೂ ಕರುವನ್ನು ಹುಡುಕಾಟ ನಡೆಸಿದಾಗ, ಶುಕ್ರವಾರ ಮಡಬಲು ಎಂಬ ಗ್ರಾಮದ ಬಳಿ ಕರುವಿನ ರುಂಡ ಪತ್ತೆಯಾಗಿದೆ.
ಘಟನೆ ಸಂಬಂಧ ಸದ್ಯ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಆರೋಪಿಗಳು ಸಾಕ್ಷ್ಯ ನಾಶಪಡಿಸಲು ಕರುವಿನ ರುಂಡ, ಕರುಳು ಹಾಗೂ ಚರ್ಮವನ್ನು ನದಿಗೆ ಎಸೆಯಲು ಪ್ರಯತ್ನಿಸಿದ್ದರು ಎನ್ನಲಾಗಿದ್ದು, ಅಷ್ಟರಲ್ಲಿ ಬೆಳಗಾಗಿ ಜಮೀನು ಕೆಲಸಕ್ಕೆ ರೈತರು ಬರುತ್ತಿರುವುದನ್ನು ಕಂಡು ಕರುವಿನ ರುಂಡವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರು.
ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಈ ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ರಾಜ್ಯದಲ್ಲಿ ಪದೇ ಪದೇ ಈ ರೀತಿಯ ಘಟನೆಗಳು ನಡೆಯುತ್ತಿರುವುದು ನಿಜಕ್ಕೂ ದುರಂತವೇ ಸರಿ. ಈ ಬಗ್ಗೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…
ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…
ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…
ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್ಗಾರ್ ಮತ್ತು ಅಜೀವಿಕಾ…
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…