Mysore
14
clear sky

Social Media

ಗುರುವಾರ, 25 ಡಿಸೆಂಬರ್ 2025
Light
Dark

ಬಿಜೆಪಿಯಲ್ಲಿ ಯದುವೀರ್‌ರಂತ ಸಂತತಿ ಹೆಚ್ಚಲಿ : ದಸರಾ ಉದ್ಘಾಟಕಿ ಬಾನು ಮುಷ್ತಾಕ್‌

ಹಾಸನ : ನಾಡಹಬ್ಬ ದಸರಾ ಉದ್ಘಾಟಕರ ಆಯ್ಕೆ ಸುದ್ದಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದ್ದು, ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಪರ-ವಿರೋಧ ಚರ್ಚೆಗಳ ನಡುವೆ ಇದಕ್ಕೆ ಸ್ವತಃ ಬಾನು ಮುಷ್ತಾಕ್ ಪ್ರತಿಕ್ರಿಯಿಸಿದ್ದು, ಕೋಟ್ಯಾಂತರ ಕನ್ನಡಿಗರು ಎಷ್ಟೊಂದು ಪ್ರೀತಿ ಅಭಿಮಾನ ಕೊಡುತ್ತಿದ್ದಾರೆ. ಒಬ್ಬರು ಅಥವಾ ಇಬ್ಬರ ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ಕೊಡಬೇಕು ಎಂದು ಪರೋಕ್ಷವಾಗಿ ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು ಅವರು, ಟೀಕಿಸಿದವರ ವಿರುದ್ಧ ಮಾತನಾಡುವ ಅಗತ್ಯ ಇಲ್ಲ ಎನ್ನಿಸುತ್ತೆ. ವಿರೋದ ಪಕ್ಷ ಆಡಳಿತ ಪಕ್ಷ ಇರಬೇಕು. ರಾಜಕೀಯ ಮಾಡಬೇಕು. ಆದರೆ ಯಾವ ವಿಚಾರದಲ್ಲಿ ರಾಜಕೀಯ ಮಾಡಬೇಕು ಯಾವುದರಲ್ಲಿ ಮಾಡಬಾರದು ಎನ್ನುವ ಪ್ರಜ್ಞೆ ಸಕ್ರಿಯ ರಾಜಕಾರಣಿಗಳಿಗೆ ಇರಬೇಕಾಗುತ್ತೆ ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಮೈಸೂರು ಸಂಸದ ಯದುವೀರ್‌ ಅಂತಹವರ ಸಂತತಿ ಹೆಚ್ಚಲಿ
ಬಿಜೆಪಿ ಪಕ್ಷದಲ್ಲಿ ಮೈಸೂರಿನ ಸಂಸದ ಯದುವೀರ್ ಅಂತಹವರ ಸಂತತಿ ಹೆಚ್ಚಾಗಲಿ ಎಂದು ಅಪೇಕ್ಷೆ ಪಡುತ್ತೇನೆ. ಒಂದು ಸಮತೋಲನದಿಂದ ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದೆ ಹೇಳಿಕೆ ನೀಡಬೇಕು. ಅಂತಹ ವಿದ್ಯಾವಂತ ಸುಸಂಸ್ಕೃತ ಮನಸುಗಳಿಗೆ ಮಾತ್ರ ಸಾಧ್ಯ. ಬೂಕರ್ ಅಂತಹ ಪ್ರಶಸ್ತಿ ಸಿಗೋದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಬಹಳ ಕೇವಲವಾಗಿ ಮಾತನಾಡುತ್ತಾರೆ. ಅದರ ಬಗ್ಗೆ ನನಗೆ ಬೇಜಾರಿಲ್ಲ. ಅವರವರ ಮಟ್ಟಕ್ಕೆ ತಕ್ಕಹಾಗೆ ಮಾತಾಡ್ತಾರೆ ಮಾತಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ.

Tags:
error: Content is protected !!