ಹಾಸನ

ಬಿಜೆಪಿಯಲ್ಲಿ ಯದುವೀರ್‌ರಂತ ಸಂತತಿ ಹೆಚ್ಚಲಿ : ದಸರಾ ಉದ್ಘಾಟಕಿ ಬಾನು ಮುಷ್ತಾಕ್‌

ಹಾಸನ : ನಾಡಹಬ್ಬ ದಸರಾ ಉದ್ಘಾಟಕರ ಆಯ್ಕೆ ಸುದ್ದಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದ್ದು, ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಪರ-ವಿರೋಧ ಚರ್ಚೆಗಳ ನಡುವೆ ಇದಕ್ಕೆ ಸ್ವತಃ ಬಾನು ಮುಷ್ತಾಕ್ ಪ್ರತಿಕ್ರಿಯಿಸಿದ್ದು, ಕೋಟ್ಯಾಂತರ ಕನ್ನಡಿಗರು ಎಷ್ಟೊಂದು ಪ್ರೀತಿ ಅಭಿಮಾನ ಕೊಡುತ್ತಿದ್ದಾರೆ. ಒಬ್ಬರು ಅಥವಾ ಇಬ್ಬರ ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ಕೊಡಬೇಕು ಎಂದು ಪರೋಕ್ಷವಾಗಿ ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು ಅವರು, ಟೀಕಿಸಿದವರ ವಿರುದ್ಧ ಮಾತನಾಡುವ ಅಗತ್ಯ ಇಲ್ಲ ಎನ್ನಿಸುತ್ತೆ. ವಿರೋದ ಪಕ್ಷ ಆಡಳಿತ ಪಕ್ಷ ಇರಬೇಕು. ರಾಜಕೀಯ ಮಾಡಬೇಕು. ಆದರೆ ಯಾವ ವಿಚಾರದಲ್ಲಿ ರಾಜಕೀಯ ಮಾಡಬೇಕು ಯಾವುದರಲ್ಲಿ ಮಾಡಬಾರದು ಎನ್ನುವ ಪ್ರಜ್ಞೆ ಸಕ್ರಿಯ ರಾಜಕಾರಣಿಗಳಿಗೆ ಇರಬೇಕಾಗುತ್ತೆ ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಮೈಸೂರು ಸಂಸದ ಯದುವೀರ್‌ ಅಂತಹವರ ಸಂತತಿ ಹೆಚ್ಚಲಿ
ಬಿಜೆಪಿ ಪಕ್ಷದಲ್ಲಿ ಮೈಸೂರಿನ ಸಂಸದ ಯದುವೀರ್ ಅಂತಹವರ ಸಂತತಿ ಹೆಚ್ಚಾಗಲಿ ಎಂದು ಅಪೇಕ್ಷೆ ಪಡುತ್ತೇನೆ. ಒಂದು ಸಮತೋಲನದಿಂದ ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದೆ ಹೇಳಿಕೆ ನೀಡಬೇಕು. ಅಂತಹ ವಿದ್ಯಾವಂತ ಸುಸಂಸ್ಕೃತ ಮನಸುಗಳಿಗೆ ಮಾತ್ರ ಸಾಧ್ಯ. ಬೂಕರ್ ಅಂತಹ ಪ್ರಶಸ್ತಿ ಸಿಗೋದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಬಹಳ ಕೇವಲವಾಗಿ ಮಾತನಾಡುತ್ತಾರೆ. ಅದರ ಬಗ್ಗೆ ನನಗೆ ಬೇಜಾರಿಲ್ಲ. ಅವರವರ ಮಟ್ಟಕ್ಕೆ ತಕ್ಕಹಾಗೆ ಮಾತಾಡ್ತಾರೆ ಮಾತಾಡಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

1 hour ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago