ಹಾಸನ

ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರು: ಕಾಲ್ತುಳಿತದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗೆ ಪತ್ರ ಬರೆದ ಎಸ್‌ಪಿ

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಇಂದು ಕೂಡ ಭಕ್ತರ ಸಂಖ್ಯೆ ತುಂಬಾ ಹೆಚ್ಚಾಗಿದೆ.

ನಿನ್ನೆಯವರೆಗೂ 17 ಲಕ್ಷ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಮೂರು ದಿನ ದೇವಿಯ ದರ್ಶನಕ್ಕೆ ಅವಕಾಶವಿದೆ.

ಇನ್ನು ಹಾಸನಾಂಬೆ ದರ್ಶನದಲ್ಲಿ ಕಾಲ್ತುಳಿತದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗೆ ಎಸ್‌ಪಿ ಪತ್ರ ಬರೆದಿದ್ದಾರೆ.

ಇದನ್ನು ಓದಿ: ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ: ಬೆಂಗಳೂರು-ಹಾಸನ ಬಸ್‌ ಸಂಚಾರ ತಾತ್ಕಾಲಿಕ ಸ್ಥಗಿತ

ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು, ಪ್ರತಿದಿನವೂ ಲಕ್ಷಾಂತರ ಮಂದಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಸ್ಥಳಾವಕಾಶ ಕಡಿಮೆ ಇದೆ. ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಿದ್ದಾರೆ. ಹೊರ ಜಿಲ್ಲೆಗಳ ಭಕ್ತರನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಅನಾಹುತವಾದರೆ ನಾವು ಹೊಣೆಯಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಿಶೇಷ ಬಸ್‌ಗಳ ವ್ಯವಸ್ಥೆ ರದ್ದು ಮಾಡುವಂತೆ ಜಿಲ್ಲಾಧಿಕಾರಿಗೆ ಹಾಸನ ಎಸ್ಪಿ ಮೊಹಮ್ಮದ್‌ ಸುಜೀತಾ ಪತ್ರ ಬರೆದಿದ್ದು, ಕಾಲ್ತುಳಿತದ ಅತಂಕ ವ್ಯಕ್ತಪಡಿಸಿದ್ದಾರೆ.

ನಾಳೆಯಿಂದ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಅಪಾರ ಪ್ರಮಾಣದಲ್ಲಿ ಹೆಚ್ಚಾಗುವ ಎಲ್ಲಾ ಸಾಧ್ಯತೆ ಉದೆ.

ಹಾಸನ ನಗರ ಚಿಕ್ಕದಾಗಿದ್ದು, ದೇವಸ್ಥಾನದ ಸುತ್ತಮುತ್ತ ಸ್ಥಳಾವಕಾಶ ಕಡಿಮೆ ಇದೆ. ಇದೇ ರೀತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇತರೆ ವಾಹನಗಳಲ್ಲಿ ಆಗಮಿಸಿದ್ದಲ್ಲಿ ಎಲ್ಲಾ ರೀತಿಯ ಸರತಿ ಸಾಲಿನಲ್ಲಿ ಜನಸಂದಣಿ ಜಾಸ್ತಿಯಾಗಿ ಇತರೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಎಲ್ಲಾ ಸರತಿ ಸಾಲುಗಳಲ್ಲಿ ನೂಕುನುಗ್ಗಲಿನಿಂತ ಕಾಲ್ತುಳಿತ ಉಂಟಾಗಿ ಅಹಿತಕರ ಘಟನೆ ಜರುಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಹೊರ ಜಿಲ್ಲೆಗಳಿಂದ ಕೆಎಸ್‌ಆರ್‌ಟಿಸಿ ಮತ್ತು ಇತರೆ ವಾಹನಗಳ್ಲಲಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸುವಂತೆ ಕೋರಲಾಗಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

14 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

15 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago