ಹಾಸನ

ಹಾಸನಾಂಬೆ ದರ್ಶನದ ಬಗ್ಗೆ ಸಚಿವ ಕೃಷ್ಣಭೈರೇಗೌಡ ಮಹತ್ವದ ಮಾಹಿತಿ: ಏನದು ಗೊತ್ತಾ?

ಹಾಸನ: ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದ್ದಾರೆ.

ದೈನಂದಿನ ಮಾಹಿತಿ ನೀಡಿರುವ ಸಚಿವರು, ದೀಪಾವಳಿ ವಿಶೇಷ ಪೂಜೆ ನೈವೇದ್ಯಗಳು ಹಾಗೂ ಇತರ ಅಲಂಕಾರಗಳ ಕಾರಣಕ್ಕಾಗಿ ಕೆಲವು ಸಂದರ್ಭಗಳಲ್ಲಿ ದೇವಸ್ಥಾನದ ಬಾಗಿಲುಗಳನ್ನು ಮುಚ್ಚಲಾಗಿದೆ ಎಂದು ವಿವರಿಸಿದ್ದಾರೆ.

ಸೋಮವಾರ ಬೆಳಗ್ಗೆಯೂ ಹಾಸನಾಂಬ ದರ್ಶನ ಸುಗಮವಾಗಿ ನಡೆದಿದೆ. ಪೂಜಾ ಕಾರ್ಯಕ್ರಮದ ಕಾರಣ ಸೋಮವಾರ ಹಾಗೂ ಮಂಗಳವಾರ ಮಧ್ಯಾಹ್ನ 2 ರಿಂದ 3.30 ಗಂಟೆಯ ನಡುವೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನು ಓದಿ:ಹಬ್ಬದ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ 

ಮಂಗಳವಾರ ದೀಪಾವಳಿ ವಿಶೇಷ ಪೂಜೆಯ ಕಾರಣಕ್ಕೆ ರಾತ್ರಿ 9 ಗಂಟೆಗೆ ಸಾರ್ವಜನಿಕ ದರ್ಶನದ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ಬುಧವಾರ ಬೆಳಗಿನ ಜಾವ 5.30ಕ್ಕೆ ಪೂಜೆ ಮುಗಿಸಿ ಮತ್ತೆ ದರ್ಶನ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.

ಕೊನೆಯ ದಿನವಾದ ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ಅದೇ ದಿನ ಸಂಜೆ ಸಿದ್ದೇಶ್ವರ ಸ್ವಾಮಿಯ ಜಾತ್ರೆ ಇದೆ. ಗುರುವಾರ ಮಧ್ಯಾಹ್ನ ಶಾಸ್ತ್ರದ ಪ್ರಕಾರ ಪೂಜೆ ನೆರವೇರಿಸಿ ಮುಂದಿನ ವರ್ಷದವರೆಗೆ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಆದರೆ, ಈ ದಿನ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಭಕ್ತಾಧಿಗಳು ಈ ಸಮಯಕ್ಕೆ ಅನುಗುಣವಾಗಿ ತಮ್ಮ ದೇವಾಲಯದ ಭೇಟಿಯನ್ನು ಯೋಜಿಸಿಕೊಳ್ಳಬೇಕಾಗಿ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

1 hour ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

1 hour ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

3 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

5 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

5 hours ago