ಹಾಸನ

ಹಾಸನಾಂಬೆ ದರ್ಶನದ ಬಗ್ಗೆ ಸಚಿವ ಕೃಷ್ಣಭೈರೇಗೌಡ ಮಹತ್ವದ ಮಾಹಿತಿ: ಏನದು ಗೊತ್ತಾ?

ಹಾಸನ: ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದ್ದಾರೆ.

ದೈನಂದಿನ ಮಾಹಿತಿ ನೀಡಿರುವ ಸಚಿವರು, ದೀಪಾವಳಿ ವಿಶೇಷ ಪೂಜೆ ನೈವೇದ್ಯಗಳು ಹಾಗೂ ಇತರ ಅಲಂಕಾರಗಳ ಕಾರಣಕ್ಕಾಗಿ ಕೆಲವು ಸಂದರ್ಭಗಳಲ್ಲಿ ದೇವಸ್ಥಾನದ ಬಾಗಿಲುಗಳನ್ನು ಮುಚ್ಚಲಾಗಿದೆ ಎಂದು ವಿವರಿಸಿದ್ದಾರೆ.

ಸೋಮವಾರ ಬೆಳಗ್ಗೆಯೂ ಹಾಸನಾಂಬ ದರ್ಶನ ಸುಗಮವಾಗಿ ನಡೆದಿದೆ. ಪೂಜಾ ಕಾರ್ಯಕ್ರಮದ ಕಾರಣ ಸೋಮವಾರ ಹಾಗೂ ಮಂಗಳವಾರ ಮಧ್ಯಾಹ್ನ 2 ರಿಂದ 3.30 ಗಂಟೆಯ ನಡುವೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನು ಓದಿ:ಹಬ್ಬದ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ 

ಮಂಗಳವಾರ ದೀಪಾವಳಿ ವಿಶೇಷ ಪೂಜೆಯ ಕಾರಣಕ್ಕೆ ರಾತ್ರಿ 9 ಗಂಟೆಗೆ ಸಾರ್ವಜನಿಕ ದರ್ಶನದ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ಬುಧವಾರ ಬೆಳಗಿನ ಜಾವ 5.30ಕ್ಕೆ ಪೂಜೆ ಮುಗಿಸಿ ಮತ್ತೆ ದರ್ಶನ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.

ಕೊನೆಯ ದಿನವಾದ ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ಅದೇ ದಿನ ಸಂಜೆ ಸಿದ್ದೇಶ್ವರ ಸ್ವಾಮಿಯ ಜಾತ್ರೆ ಇದೆ. ಗುರುವಾರ ಮಧ್ಯಾಹ್ನ ಶಾಸ್ತ್ರದ ಪ್ರಕಾರ ಪೂಜೆ ನೆರವೇರಿಸಿ ಮುಂದಿನ ವರ್ಷದವರೆಗೆ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಆದರೆ, ಈ ದಿನ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಭಕ್ತಾಧಿಗಳು ಈ ಸಮಯಕ್ಕೆ ಅನುಗುಣವಾಗಿ ತಮ್ಮ ದೇವಾಲಯದ ಭೇಟಿಯನ್ನು ಯೋಜಿಸಿಕೊಳ್ಳಬೇಕಾಗಿ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

8 mins ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

41 mins ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

5 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

5 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

5 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

5 hours ago