ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಉತ್ತರ ನೀಡಲು ಆಗದೇ ಸಿಎಂ ಸಿದ್ದರಾಮಯ್ಯ ಮಂತ್ರಿಗಳ ಮೂಲಕ ಸಮಜಾಯಿಸಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ೯೦ ಕೋಟಿ ತಿಂದ್ರ ಭ್ರಷ್ಟಚಾರ, ೯೦ ರೂ ತಿಂದರೂ ಕೂಡ ಭ್ರಷ್ಟಚಾರ. ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಬಳಿಕ ಹಗರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕು. ಎಚ್ ಡಿ ದೇವೇಗೌಡರು ಪ್ರಧಾನಿ ಆಗಿದ್ದು ಸಿಪಿಐ, ಪ್ರಾದೇಶಿಕ ಪಕ್ಷಗಳ ಬೆಂಬಲದಿಂದ ಆದ್ರೆ ಕಾಂಗ್ರೆಸ್ ನವರು ನಮ್ಮಿಂದ ಪ್ರಧಾನಮಂತ್ರಿ ಆದರು ಅಂತ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಅಲ್ಲದೆ ಮುಡಾ ಹಗರಣ ನಡೆದಿದೆ ಅಂತ ದಾಖಲೆ ಸಮೇತ ಹೇಳುತ್ತಿದ್ದೇವೆ. ಕಾಂಗ್ರೆಸ್ ನಾಯಕರ ಮುಖದಲ್ಲಿ ಪಾಪ ಪ್ರಜ್ಞೆ ಕಾಣುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ನವರ ಪಾಪದ ಕೊಡತುಂಬಿದೆ. ಐದು ವರ್ಷಗಳ ಹಿಂದೆಯೇ ರಾಮನಗರ ಜಿಲ್ಲೆ ಅಭಿವೃದ್ಧಿಯಾಗಿದೆ. ರಾಮನಗರವನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಹೊರಟಿದ್ದಾರೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಇದೇ ವೇಳೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿ ಬಗ್ಗೆ ನಿರ್ಧಾರವಾಗಿಲ್ಲ. ಮೋದಿ ಅಮಿತ್ ಶಾ ಜೊತೆ ಚರ್ಚಿಸಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ತಿಳಿಸಿದರು.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…