ಹಾಸನ

ಸಕಲೇಶಪುರ ದೊಡ್ಡತಪ್ಪಲು ಗುಡ್ಡಕುಸಿತ ಪ್ರದೇಶಕ್ಕೆ ಎಚ್.ಡಿ.ಕೆ ಭೇಟಿ ಪರಿಶೀಲನೆ

ಹಾಸನ : ಬೆಂಗಳೂರು ಮಂಗಳೂರು ಹೆದ್ದಾರಿ ಗುಡ್ಡಕುಸಿತಕ್ಕೆ ಸಂಬಂಧಿಸಿದಂತೆ ಸಕಲೇಶಪುರ ದೊಡ್ಡತಪ್ಪಲು ಗುಡ್ಡಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು ಪರಿಶೀಲನೆ ಬಳಿಕ ಮಾತನಾಡಿದ ಕೇಂದ್ರ ಸಚಿವರು, ಕಳೆದ ಐದಾರು ದಿನಗಳಿಂದ ದೊಡ್ಡಮಟ್ಟದಲ್ಲಿ ಮಳೆ ಆರಂಭವಾಗಿದೆ. ೨೦೧೮ರಲ್ಲಿ ನಾನು ಸಿಎಂ ಆಗಿದ್ದಾಗ ಇದೇ ರೀತಿ ಮಳೆಯಾಗಿತ್ತು. ೨೦೧೮ ರ ನಂತರ ಈಗ ಈ ರೀತಿ ಮಳೆಯಾಗಿದೆ. ಒಂದೆಡೆ ಜಲಾಶಯಗಳು ತುಂಬಿದ್ದು, ಪಕ್ಕದ ರಾಜ್ಯಗಳ ಜತೆ ಸಂಘರ್ಷಕ್ಕೆ ಒಂದು ವರ್ಷ ವಿರಾಮ ಸಿಕ್ಕಿದೆ. ಮಳೆಯಿಂದ ಆಗಿರುವ ಅನಾಹುತಗಳು, ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಶಿರೂರಿನಲ್ಲಿ ಮಳೆ ಮುಂದುವರೆದರೆ ಇನ್ನೂ ಭೂ ಕುಸಿತವಾಗುತ್ತದೆ. ಸಕಲೇಶಪುರದಿಂದ ಉದ್ದಕ್ಕೂ ಭೂಕುಸಿತವಾಗುತ್ತಲೇ ಇದೆ. ಕೇಂದ್ರದ ಭೂ ಸಾರಿಗೆ ಸಚಿವರಿಗೆ ಎಲ್ಲಾ ಮಾಹಿತಿ ಕೊಡುತ್ತೇನೆ. ವೈಜ್ಷಾನಿಕ ಕಾಮಗಾರಿ ಮಾಡಲಿ ಗಡ್ಕರಿ ಅವರ ಜೊತೆ ಚರ್ಚೆ ಮಾಡುತ್ತೇನೆ. ಸ್ಥಳಕ್ಕೆ ಒಮ್ಮೆ ಮನವಿ ನೀಡಲು ಮನವಿ ಮಾಡುತ್ತೇನೆ. ರಾಜ್ಯ ಸರ್ಕಾರ ಮಂತ್ರಿಗಳು ಭೇಟಿ ನೀಡಿ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಬೇಕು, ಹಾಗಾಗಿ ನಾನು ನಿನ್ನೆಯಿಂದ ಭೇಟಿ ನೀಡುತ್ತಿದ್ದೇನೆ ಎಂದರು.

ಈ ವೇಳೆ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಶಾಸಕರುಗಳಾದ ಸಿಮೆಂಟ್‌ ಮಂಜು, ಎಚ್.ಪಿ ಸ್ವರೂಪ್‌ ಪ್ರಕಾಶ್‌, ಸಿಎನ್‌ ಬಾಲಕೃಷ್ಣ , ಎಚ್‌ ಕೆ ಸುರೇಶ್‌ ಸಾಥ್ ನೀಡಿದರು. ಅಲ್ಲದೆ ಜಿಲ್ಲಾಧಿಕಾರಿ ಸತ್ಯಭಾಮ ಎಸ್ಪಿ ಮಹಮದ್‌ ಸುಜೇತಾ, ಎಸಿ ಶೃತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

3 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

6 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

9 hours ago