ಹಾಸನ : ಬೆಂಗಳೂರು ಮಂಗಳೂರು ಹೆದ್ದಾರಿ ಗುಡ್ಡಕುಸಿತಕ್ಕೆ ಸಂಬಂಧಿಸಿದಂತೆ ಸಕಲೇಶಪುರ ದೊಡ್ಡತಪ್ಪಲು ಗುಡ್ಡಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನು ಪರಿಶೀಲನೆ ಬಳಿಕ ಮಾತನಾಡಿದ ಕೇಂದ್ರ ಸಚಿವರು, ಕಳೆದ ಐದಾರು ದಿನಗಳಿಂದ ದೊಡ್ಡಮಟ್ಟದಲ್ಲಿ ಮಳೆ ಆರಂಭವಾಗಿದೆ. ೨೦೧೮ರಲ್ಲಿ ನಾನು ಸಿಎಂ ಆಗಿದ್ದಾಗ ಇದೇ ರೀತಿ ಮಳೆಯಾಗಿತ್ತು. ೨೦೧೮ ರ ನಂತರ ಈಗ ಈ ರೀತಿ ಮಳೆಯಾಗಿದೆ. ಒಂದೆಡೆ ಜಲಾಶಯಗಳು ತುಂಬಿದ್ದು, ಪಕ್ಕದ ರಾಜ್ಯಗಳ ಜತೆ ಸಂಘರ್ಷಕ್ಕೆ ಒಂದು ವರ್ಷ ವಿರಾಮ ಸಿಕ್ಕಿದೆ. ಮಳೆಯಿಂದ ಆಗಿರುವ ಅನಾಹುತಗಳು, ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಶಿರೂರಿನಲ್ಲಿ ಮಳೆ ಮುಂದುವರೆದರೆ ಇನ್ನೂ ಭೂ ಕುಸಿತವಾಗುತ್ತದೆ. ಸಕಲೇಶಪುರದಿಂದ ಉದ್ದಕ್ಕೂ ಭೂಕುಸಿತವಾಗುತ್ತಲೇ ಇದೆ. ಕೇಂದ್ರದ ಭೂ ಸಾರಿಗೆ ಸಚಿವರಿಗೆ ಎಲ್ಲಾ ಮಾಹಿತಿ ಕೊಡುತ್ತೇನೆ. ವೈಜ್ಷಾನಿಕ ಕಾಮಗಾರಿ ಮಾಡಲಿ ಗಡ್ಕರಿ ಅವರ ಜೊತೆ ಚರ್ಚೆ ಮಾಡುತ್ತೇನೆ. ಸ್ಥಳಕ್ಕೆ ಒಮ್ಮೆ ಮನವಿ ನೀಡಲು ಮನವಿ ಮಾಡುತ್ತೇನೆ. ರಾಜ್ಯ ಸರ್ಕಾರ ಮಂತ್ರಿಗಳು ಭೇಟಿ ನೀಡಿ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಬೇಕು, ಹಾಗಾಗಿ ನಾನು ನಿನ್ನೆಯಿಂದ ಭೇಟಿ ನೀಡುತ್ತಿದ್ದೇನೆ ಎಂದರು.
ಈ ವೇಳೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಶಾಸಕರುಗಳಾದ ಸಿಮೆಂಟ್ ಮಂಜು, ಎಚ್.ಪಿ ಸ್ವರೂಪ್ ಪ್ರಕಾಶ್, ಸಿಎನ್ ಬಾಲಕೃಷ್ಣ , ಎಚ್ ಕೆ ಸುರೇಶ್ ಸಾಥ್ ನೀಡಿದರು. ಅಲ್ಲದೆ ಜಿಲ್ಲಾಧಿಕಾರಿ ಸತ್ಯಭಾಮ ಎಸ್ಪಿ ಮಹಮದ್ ಸುಜೇತಾ, ಎಸಿ ಶೃತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…