ಹಾಸನ: ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಶುಕ್ರವಾರ 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ.
ಶುಕ್ರವಾರ ಸಾಗರೋಪಾದಿಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತ್ತು.
ಇದನ್ನು ಓದಿ: ಹಾಸನಾಂಬ ದರ್ಶನಕ್ಕೆ ಇಂದೂ ಕೂಡ ಹರಿದು ಬಂದ ಜನಸಾಗರ
1,60,000 ಭಕ್ತರು ದರ್ಶನ ಪಡೆದಿದ್ದು, ಎಲ್ಲಾ ಸರತಿ ಸಾಲುಗಳು ಸಂಪೂರ್ಣ ಭರ್ತಿಯಾಗಿದ್ದು, 1000, 300 ರೂ ವಿಶೇಷ ದರ್ಶನ ಸಾಲುಗಳು ಕೂಡ ಭರ್ತಿಯಾಗಿದ್ದವು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ತಿಳಿಸಿದರು.
ಬೆಳಿಗ್ಗೆ 7 ಗಂಟೆಗೆ ಸರತಿ ಸಾಲಿನಲ್ಲಿ ನಿಂತವರು ಸಂಜೆ 4 ಗಂಟೆಗೆ ದರ್ಶನ ಪಡೆದು ಹೊರ ಬಂದಿದ್ದಾರೆ. ಗರ್ಭಗುಡಿ ಬಳಿ ನೂಕುತ್ತಿದ್ದಂತೆ ಕೆಲವರು ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಿದರು.
ಭಕ್ತರು ತಾಳ್ಮೆ ಹಾಗೂ ಶಾಂತಿಯಿಂದ ಸಹಕರಿಸಬೇಕು ಎಂದ ಅವರು, ಭಕ್ತರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…