More than 50 people fall ill after consuming prasad at fair
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ.
ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ ಭಕ್ತರಿಗೆ ಮೊಸರನ್ನ ಹಾಗೂ ಬಿಸಿ ಬೇಳೆ ಬಾತ್ ಹಂಚಿಕೆ ಮಾಡಲಾಗಿತ್ತು. ಸುಮಾರು ಒಂದೂವರೆ ಸಾವಿರ ಜನರಿಗೆ ಪ್ರಸಾದ ವಿತರಣೆ ಮಾಡಲಾಗಿತ್ತು.
ಪ್ರಸಾದ ಸೇವನೆ ಬಳಿಕ ಹೊಟ್ಟೆ ನೋವು, ವಾಂತಿಯಿಂದ ಅನೇಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾಗಿರುವ 50ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಸಾದ ಸೇವಿಸಿದ ಕೂಡಲೇ ಚಿಕಿತ್ಸೆ ಪಡೆದುಕೊಂಡಿದ್ದರಿಂದ ಭಕ್ತರು ಅಪಾಯದಿಂದ ಪಾರಾಗಿದ್ದಾರೆ. ಭಕ್ತರು ಸೇವಿಸಿದ ಪ್ರಸಾದದ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ಗೆ ರವಾನೆ ಮಾಡಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…